ಎಲ್ಲರಿಗೂ ಮನೆ: ವಸತಿ ಸಮುಚ್ಛಯ ಕಾಮಗಾರಿ ವೀಕ್ಷಣೆ
ಗದಗ 08: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಎಲ್ಲರಿಗೂ ಮನೆ 2022ರ ಯೋಜನೆಯಡಿ ಗದಗ-ಬೆಟಗೇರಿ ನಗರ ಗಂಗಿಮಡಿಯಲ್ಲಿ ನಿಮರ್ಿಸುತ್ತಿರುವ 2ನೇ ಹಂತದ ವಸತಿ ಸಮುಚ್ಛಯ ಕಾಮಗಾರಿಯನ್ನು ರಾಜ್ಯದ ಕೌಶಲ್ಯಾಭಿವೃದ್ಧಿ, ಮುಜರಾಯಿ ಇಲಾಖೆಗಳ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ ಅವರಿಂದು ವೀಕ್ಷಿಸಿದರು.
ಗದಗ-ಬೆಟಗೇರಿ ನಗರ ಸಭೆಯ ಈ ವಸತಿ ಸಮುಚ್ಛಯ 51 ಎಕರೆ 27 ಗುಂಟೆ ಜಾಗೆಯಲ್ಲಿ ಮೊದಲ ಮಹಡಿ ಘಟಕದೊಂದಿಗೆ ಒಟ್ಟು 3630 ಮನೆಗಳ ನಿಮರ್ಾಣ ಯೋಜನೆ ಇದಾಗಿದೆ ಎಂದು ಶಾಸಕ ಎಚ್.ಕೆ.ಪಾಟೀಲ ನುಡಿದರು.
ಪ್ರತಿ ಮನೆಯ ಕಾಪರ್ೆಟ ಏರಿಯಾ 355 ಚದುರ ಅಡಿ ಇರಲಿದ್ದು ಈ ಯೋಜನೆಗೆ ಕೇಂದ್ರ ಸಕರ್ಾರ 54.45 ಕೋಟಿ ರೂ. ರಾಜ್ಯ ಸಕರ್ಾರ 49.42 ಕೋಟಿ ರೂ. ಫಲಾನುಭವಿಗಳ ವಂತಿಕೆ 137.65 ಕೋಟಿ ಹಾಗೂ ನಗರಸಭೆಯ ವಂತಿಕೆ 2.45 ಕೋಟಿ ರೂ. ಇರಲಿದ್ದು 2020ರ ಮಾರ್ಚ ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಯೋಜನೆ ವಿವರ ನೀಡಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 