ಅಸ್ಸಾಂನಲ್ಲಿ ಐಸಿಸ್ ಪ್ರೇರಿತ ಉಗ್ರರ ಸೆರೆ, ತಪ್ಪಿದ ಅನಾಹುತ
isis
ನವದೆಹಲಿ, ನವೆಂಬರ್ 25: ದೆಹಲಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಸ್ಸಾಂ , ಮತ್ತು ದೆಹಲಿಯಲ್ಲಿ ದಾಳಿ ನಡೆಸುವ ಸಂಚು ಮಾಡಿದ್ದ ಐಸಿಸ್ ನಿಂದ ಪ್ರಭಾವಿರಾಗಿದ್ದ ಮೂವರು ಉಗ್ರರನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ.
ಬಂಧಿತ ಉಗ್ರರಿಂದ ಸುಧಾರಿತ ಸ್ಫೋಟಕ ವಸ್ತು(ಐಇಡಿ) ಹಾಗೂ ನಿಷೇಧಿತ ಸಾಹಿತ್ಯ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಮೂಲಕ ಭಾರೀ ಅನಾಹುತ ತಪ್ಪಿಸಿದಂತಾಗಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೊಲೀಸ್ ಮಾಹಿತಿ ಪ್ರಕಾರ, ಬಂಧಿತರು ಐಸಿಸ್ ನಿಂದ ಪ್ರಭಾವಿರಾಗಿದ್ದು, ಅಸ್ಸಾಂನ ರಾಮ್ ಮೇಳದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ತಿಳಿದು ಬಂದಿದೆ ಅಸ್ಸಾಂ ನಂತರ ದೆಹಲಿಯಲ್ಲಿ ದಾಳಿ ನಡೆಸುವ ಉದ್ದೇಶ ಹೊಂದಿರುವ ವಿಚಾರವೂ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಘಟನೆಯನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ನ ಡಿಸಿಪಿ ಪ್ರಮೋದ್ ಕುಶ್ವಾಹಾ ಅವರು ಖಚಿತಪಡಿಸಿದ್ದು, ಐಇಡಿ ಸ್ಫೋಟಕದ ಜತೆ ಮೂವರು ಉಗ್ರರನ್ನು ಬಂಧಿಸಿದ್ದರಿಂದ ಉಗ್ರರ ದಾಳಿ ಸಂಚು ವಿಫಲಗೊಳಿಸಿದಂತಾಗಿದೆ ಎಂದೂ ಹೇಳಿದ್ದಾರೆ.
ಅಸ್ಸಾಂನ ಗೋಲಾಪಾರಾ ನಿವಾಸಿಗಳಾದ ರಂಜಿತ್ ಅಲಿ, ಇಸ್ಲಾಂ ಹಾಗೂ ಜಮಾಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಮೂವರು ದೆಹಲಿಯಲ್ಲಿ ಕೆಲವರ ಜತೆ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಂಪರ್ಕ ಹೊಂದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 