ವಿವಿಧೆಡೆ ಐಟಿ ದಾಳಿ 25 ಕೋ. ರೂ ವಶ
ನವದೆಹಲಿ, 2: ದೆಹಲಿಯ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸುಮಾರು 25 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ.
ಇಂದು ಬೆಳಗ್ಗೆ ಚಾಂದಿನಿ ಚೌಕ್ ಪ್ರದೇಶ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಖಾಸಗಿ ಲಾಕರ್ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಹವಾಲ ದಂಧೆಕೋರರು ಇಷ್ಟು ಮೊತ್ತದ ಹಣವನ್ನು ಲಾಕರ್ಗಳಲ್ಲಿ ಇರಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ
ಈ ನಗದು ಹಣ ದೆಹಲಿ ಮೂಲದ ತಂಬಾಂಕು ವ್ಯಾಪಾರಸ್ಥರು, ರಸಾಯನಿಕ ಮಾರಾಟಗಾರರು ಹಾಗೂ ಒಣ ಹಣ್ಣು ವ್ಯಾಪಾರಿಗಳಿಗೆ ಸೇರಿರಬಹುದು ಎಂದು ಶಂಕಿಸಲಾಗಿದೆ. ಇವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹವಾಲ ಮಧ್ಯವತರ್ಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶಂಕಿಸಲಾಗಿದೆ.
ಈ ವರ್ಷದಲ್ಲಿ ನಡೆದ ಮೂರನೇ ಅತಿ ದೊಡ್ಡ ಐಟಿ ದಾಳಿ ಇದಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ 700 ಕೋಟಿ ರೂಪಾಯಿ ಮೊತ್ತದ ಹವಾಲ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಜಾರಿ ನಿದರ್ೆಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 29 ಕೋಟಿ ರೂ ಗಳನ್ನು ವಶಕ್ಕೆ ಪಡೆಯಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 