ಮಹಿಳೆ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಆಶಾ ಪರೀಟ
If women develop, the country develops: Asha Parita
ಯರಗಟ್ಟಿ, 01 : ‘ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ದೇಶ ಅಭಿವೃದ್ಧಿಯಾದಂತೆ’ ಎಂದು ವಸತಿ ನಿಲಯ ಪಾಲಕರಾದ ಆಶಾ ಪರೀಟ ಹೇಳಿದರು.ಪಟ್ಟಣದ ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದರು.
ಸರಕಾರ ಈಗ ‘ಒಳ್ಳೆಯ ಉದ್ದೇಶದಿಂದ ಗೃಹಲಕ್ಷ್ಮೀ ಗ್ಯಾರಂಟಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬರೂ ಶೇರ್ ಪಡೆಯಬೇಕು. ಅದರಿಂದ ಸಾಲ ನೀಡಲಾಗುವುದು. ಇದಕ್ಕೆ ಧರ್ಮಸ್ಥಳ ಸಂಘವೇ ಆದರ್ಶ, ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಜೊತೆಗೆ ಶಿಕ್ಷಣ, ಉದ್ಯೋಗಕ್ಕಾಗಿ ಸಾಲ ನೀಡುವ ವ್ಯವಸ್ಥೆ ಇರಲಿದೆ’ಎಂದು ಉದ್ಘಾಟಕರಾದ ಶಿವಾನಂದ ಬಳಿಗಾರ ಹೇಳಿದರು.
‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು ಮಹಿಳೆಯರಿಗೆ ಜ್ಞಾನ ನೀಡುವ ಮೂಲಕ ಅದನ್ನು ಇಡೀ ಸಮಾಜಕ್ಕೆ ವಿಸ್ತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಹಿಳೆಯರು ಜ್ಞಾನವನ್ನು ಪಡೆದು ತಮ್ಮ ಮಕ್ಕಳಿಗೆ ಅದನ್ನು ನೀಡುವ ಮೂಲಕ ಇಡೀ ಸಮಾಜಕ್ಕೆ ಜ್ಞಾನವನ್ನು ವಿಸ್ತಾರ ಮಾಡುವಂತಹ ಕೆಲಸವನ್ನು ಮಾಡುತ್ತಾರೆ’ ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾದ ಡಾ. ನಿರ್ಮಲಾ ಬಟ್ಟಲ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಂ. ಸುಧಾರಾಣಿ ಕರಗೂಳಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ, ಸಂಘದ ಮೇಲವಿಚಾರಕ ನಾಗರಾಜ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 