ಮಹಿಳೆ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಆಶಾ ಪರೀಟ
If women develop, the country develops: Asha Parita
ಯರಗಟ್ಟಿ, 01 : ‘ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ದೇಶ ಅಭಿವೃದ್ಧಿಯಾದಂತೆ’ ಎಂದು ವಸತಿ ನಿಲಯ ಪಾಲಕರಾದ ಆಶಾ ಪರೀಟ ಹೇಳಿದರು.ಪಟ್ಟಣದ ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದರು.
ಸರಕಾರ ಈಗ ‘ಒಳ್ಳೆಯ ಉದ್ದೇಶದಿಂದ ಗೃಹಲಕ್ಷ್ಮೀ ಗ್ಯಾರಂಟಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬರೂ ಶೇರ್ ಪಡೆಯಬೇಕು. ಅದರಿಂದ ಸಾಲ ನೀಡಲಾಗುವುದು. ಇದಕ್ಕೆ ಧರ್ಮಸ್ಥಳ ಸಂಘವೇ ಆದರ್ಶ, ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಜೊತೆಗೆ ಶಿಕ್ಷಣ, ಉದ್ಯೋಗಕ್ಕಾಗಿ ಸಾಲ ನೀಡುವ ವ್ಯವಸ್ಥೆ ಇರಲಿದೆ’ಎಂದು ಉದ್ಘಾಟಕರಾದ ಶಿವಾನಂದ ಬಳಿಗಾರ ಹೇಳಿದರು.
‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು ಮಹಿಳೆಯರಿಗೆ ಜ್ಞಾನ ನೀಡುವ ಮೂಲಕ ಅದನ್ನು ಇಡೀ ಸಮಾಜಕ್ಕೆ ವಿಸ್ತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಹಿಳೆಯರು ಜ್ಞಾನವನ್ನು ಪಡೆದು ತಮ್ಮ ಮಕ್ಕಳಿಗೆ ಅದನ್ನು ನೀಡುವ ಮೂಲಕ ಇಡೀ ಸಮಾಜಕ್ಕೆ ಜ್ಞಾನವನ್ನು ವಿಸ್ತಾರ ಮಾಡುವಂತಹ ಕೆಲಸವನ್ನು ಮಾಡುತ್ತಾರೆ’ ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾದ ಡಾ. ನಿರ್ಮಲಾ ಬಟ್ಟಲ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಂ. ಸುಧಾರಾಣಿ ಕರಗೂಳಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ, ಸಂಘದ ಮೇಲವಿಚಾರಕ ನಾಗರಾಜ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 