ಬಡ್ತಿ ಮೀಸಲಾತಿ ಕಾಯ್ದೆ ಇಷ್ಟರಲ್ಲೇ ಜಾರಿ: ಸಿಎಂ
ಬೆಂಗಳೂರು 25: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಗಂಭೀರವಾಗಿ ಚಚರ್ೆಯಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ಪ್ರಿಯಾಂಕ್ ಖಗರ್ೆ ಸಾಕಷ್ಟು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕಾಯ್ದೆ ಜಾರಿ ವಿಳಂಬದಿಂದ ಕೆಲವು ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂಬ ಅಸಮಾಧಾನವಿದೆ. ಆದರೆ ಪ್ರಕರಣದ ವಿಚಾರಣೆ ಸುಪ್ರೀಂಕೋಟರ್್ನಲ್ಲಿದೆ.
ಪ್ರತಿವಾದಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋಟರ್್ನ ತೀಪರ್ು ಯಾವ ರೀತಿ ಬರಲಿದೆ ಎಂಬುದು ಗೊತ್ತಿಲ್ಲ. ಸುಪ್ರೀಂಕೋಟರ್್ ತೀಪರ್ಿನ ಪರಿಣಾಮಗಳಿಗೆ ಬದ್ಧವಾಗಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಪರಿಶೀಲನೆ ನಡೆದಿದ್ದು, ಮುಖ್ಯ ಕಾರ್ಯದಶರ್ಿಯವರಿಂದ ವರದಿ ಕೇಳಲಾಗಿದೆ.
ರಾಷ್ಟ್ರಪತಿಗಳಿಂದ ಅಂಕಿತ ಬಂದಿರುವ ಈ ಕಾಯ್ದೆಯನ್ನು ಒಂದೆರಡು ದಿನಗಳೊಳಗಾಗಿ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಕುಮಾರಸ್ವಾಮಿ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 