ಬಡ್ತಿ ಮೀಸಲಾತಿ ಕಾಯ್ದೆ ಇಷ್ಟರಲ್ಲೇ ಜಾರಿ: ಸಿಎಂ
ಬೆಂಗಳೂರು 25: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಗಂಭೀರವಾಗಿ ಚಚರ್ೆಯಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ಪ್ರಿಯಾಂಕ್ ಖಗರ್ೆ ಸಾಕಷ್ಟು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕಾಯ್ದೆ ಜಾರಿ ವಿಳಂಬದಿಂದ ಕೆಲವು ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂಬ ಅಸಮಾಧಾನವಿದೆ. ಆದರೆ ಪ್ರಕರಣದ ವಿಚಾರಣೆ ಸುಪ್ರೀಂಕೋಟರ್್ನಲ್ಲಿದೆ.
ಪ್ರತಿವಾದಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋಟರ್್ನ ತೀಪರ್ು ಯಾವ ರೀತಿ ಬರಲಿದೆ ಎಂಬುದು ಗೊತ್ತಿಲ್ಲ. ಸುಪ್ರೀಂಕೋಟರ್್ ತೀಪರ್ಿನ ಪರಿಣಾಮಗಳಿಗೆ ಬದ್ಧವಾಗಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಪರಿಶೀಲನೆ ನಡೆದಿದ್ದು, ಮುಖ್ಯ ಕಾರ್ಯದಶರ್ಿಯವರಿಂದ ವರದಿ ಕೇಳಲಾಗಿದೆ.
ರಾಷ್ಟ್ರಪತಿಗಳಿಂದ ಅಂಕಿತ ಬಂದಿರುವ ಈ ಕಾಯ್ದೆಯನ್ನು ಒಂದೆರಡು ದಿನಗಳೊಳಗಾಗಿ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಕುಮಾರಸ್ವಾಮಿ ಹೇಳಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 