ವಲಯ ಮಟ್ಟದ ಇಲಾಖಾ ಕ್ರೀಡಾಕೂಟ ಉದ್ಘಾಟಿನೆ
Inauguration of the zonal level departmental sports meet
ವಲಯ ಮಟ್ಟದ ಇಲಾಖಾ ಕ್ರೀಡಾಕೂಟ ಉದ್ಘಾಟಿನೆ
ರಾಯಬಾಗ, 07 ; ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ಗುರುವಾರ ತಾಲೂಕಿನ ಬಾವನ ಸವದತ್ತಿ ಗ್ರಾಮದ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಾವನ ಸವದತ್ತಿ ವಲಯ ಮಟ್ಟದ ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧಾ ಮನೋಭಾವದಿಂದ ಆಟ ಪ್ರದರ್ಶಿಸಬೇಕು. ನಿರ್ಣಾಯಕರು ಯಾವುದೇ ತಾರತಮ್ಯ ಮಾಡದೆ ಸರಿಯಾದ ನಿರ್ಣಾಯ ನೀಡಬೇಕೆಂದರು.ಸಂಸ್ಥೆಯ ಅಧ್ಯಕ್ಷರು ಆಯ್. ಡಿ. ಪಾಟೀಲ, ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜೆ ಎಂ ಮಗದುಮ್ಮ, ಕಾರ್ಯದರ್ಶಿ ಎ ಟಿ ಕೂಗೆ, ಸದಸ್ಯರಾದ ಎಡಿ ಜನಾಜ, ಬಿಜೆ ಜನಾಜ, ಎಜೆ ಕಾಮಗೌಡ, ಕೆಜೆ ಕಾಮಗೌಡ, ಮುಖ್ಯಾಧ್ಯಪಕರಾದ ಎಕೆ ಸಲಗರೆ, ಎಸ್ಬಿ ಬೆನಾಡೆ ಹಾಗೂ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಶಿಕ್ಷಕ ಡಿಆರ್ ಭೇಠಡೆ ಸ್ವಾಗತಿಸಿದರು. ಅಕ್ಷತಾ ಸಮಾಜೆ ನಿರೂಪಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 