ಅಧ್ಯಯನದ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಿ
ಧಾರವಾಡ 18: ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಂಡು ಉನ್ನತ ಜೀವನ ಮಟ್ಟವನ್ನು ಹೊಂದಬೇಕು ಹಾಗೂ ಒಳ್ಳೆಯ ಕ್ರೀಡಾಪಟು ಆಗಲೂ ಸತತ ಪ್ರಯತ್ನ ಮಾಡಬೇಕೆಂದು ಸಹಾಯಕ ಪೋಲಿಸ್ ಕಮೀಷನರ್ ಎಂ.ಎನ್. ರುದ್ರಪ್ಪ ವಿದ್ಯಾರ್ಥಿ ಗಳಿಗೆ ಕಿವಿಮಾತು ಹೇಳಿದರು.
ಮಾಳಮಡ್ಡಿಯ ಕೆ.ಇ.ಬೋರ್ಡ್ ನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿ ಕ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡುತ್ತ ಕ್ರೀಡೆ ಹಾಗೂ ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು. ನಾನು ಸಹಿತ ನನ್ನ ವಿದ್ಯಾರ್ಥಿ ಜೀವನದಲ್ಲಿ ಸತತ ಪ್ರಯತ್ನದಿಂದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದೇನೆ. ವಿದ್ಯಾಥರ್ಿಗಳು ಆರೋಗ್ಯದಿಂದ ಬದುಕಬೇಕಾದರೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲವು ಮುಖ್ಯವಲ್ಲ ಎಂದರು.
ಕಲಿತ ವಿದ್ಯೆ ಎಂದಿಗೂ ವ್ಯರ್ಥವಾಗುವುದಿಲ್ಲ ಕಠಿಣ ಪರಿಶ್ರಮವೇ ಸಾಧನೆಯ ಮಾರ್ಗ ವಿದ್ಯಾರ್ಥಿ ಗಳು ಬದ್ಧತೆಯಿಂದ ವಿದ್ಯಾರ್ಜನೆ ಮಾಡಲೇಬೇಕು. ದುಶ್ಚಟಗಳಿಂದ ದೂರವಿರಬೇಕೆಂದು ಕೆ.ಜಿ.ನಾಡಗೀರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಬಾಹುಬಲಿ ಚೌಗಲಾ ವಿದ್ಯಾರ್ಥಿ ಗಳಿಗೆ ಹಿತನುಡಿದರು.
ಪ್ರಾಚಾರ್ಯ ವಸಂತ ಮುರ್ಡ್ ಶ್ವರ ಅಧ್ಯಕ್ಷತೆ ವಹಿಸಿದ್ದರು. ಎಸ್.ಜಿ.ಕಡಪಟ್ಟಿ, ಎಸ್.ಎಲ್.ಶೇಖರಗೋಳ, ಡಾ. ಸುರೇಶ ಮುಳೆ, ಜಿ.ಸಿ.ಕುಲಕರ್ಣಿ , ಎಸ್.ಎಸ್. ಅಂಗಡಿ, ಮುಂತಾದವರು ಉಪಸ್ಥಿತರಿದ್ದರು. ಹೇಮಲತಾ ಕರಿಗಾರ ನಿರೂಪಿಸಿದರು. ಕೀರ್ತಿ ಮರೆದ ಪರಿಚಯಿಸಿದರು. ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಸಂಜಯ ಮೂಲಿಮನಿ ಬೋಧಿಸಿದರು. ಮಹೇಶ ಬೈರೂಪಗಾರ ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 