ಕಬ್ಬಿನ ಬೆಲೆ ನಿಗದಿಗಾಗಿ ಅನಿರ್ದಿಷ್ಟಾವಧಿ ಮುಷ್ಕರ
Indefinite strike for sugarcane price fixing
ಇಂಡಿ 03: ತಾಲೂಕಿನ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವವರೆಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ರೈತ ಜಿಲ್ಲಾ ಅಧ್ಯಕ್ಷ ಹೇಳಿದರು. ಈ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಇಂಡಿ ತಾಲೂಕಿನ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಅವರು ಮಾತನಾಡಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಲೆ ನಿಗದಿ ಮಾಡಬೇಕು ಹಾಗೂ ಈ ಬಾರಿ ಸುರಿದ ಭಾರಿ ಮಳೆಯಿಂದ ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಇವರಿಗೆ ಪರಿಹಾರ ನೀಡಿದೆ.ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗೂ ಪ್ರವಾಹ ಭೀತಿಯಿಂದ ಭೀಮಾ ತೀರದಲ್ಲಿ ಸುಮಾರು ಎಕರೆ ಕಬ್ಬು ಬೆಳೆ ಹಾಗೂ ಹತ್ತಿ ಮೆಕ್ಕೆಜೋಳ ತೊಗರಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿವೆ. ಹಾಗೂ ಅನೇಕ ಮನೆಗಳಿಗೆ ನೀರು ನುಗ್ಗಿ ಮನೆ ಕಳೆದುಕೊಂಡ ನೊಂದ ಫಲಾನುಭವಿಗಳಿಗೆ ಇನ್ನೂ ಮನೆ ಪರಿಹಾರ ನೀಡಿಲ್ಲ. ಆದರೆ ಸರ್ಕಾರ ಮಾತ್ರ ನವೆಂಬರ್ ಕ್ರಾಂತಿ ಡಿಸೆಂಬರ್ ಕ್ರಾಂತಿ ಹೇಳುತ್ತಾ ಜನರ ನಿದ್ದೆಗೆಡಿಸಿದೆ. ನಾವು ರೈತ ಪರ ಅಂತ ಹೇಳುವ ಕಾಂಗ್ರೆಸ್ ಪಕ್ಷ ರೈತರ ಜ್ಯೋತಿ ಚೆಲ್ಲಾಟ ಆಡುತ್ತಾ ಕಾಲ ಹರಣ ಮಾಡುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 