ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತ: ಐಹೊಳೆ
India is the largest democracy in the world: Ihole
ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತ: ಐಹೊಳೆ
ರಾಯಬಾಗ 26: ಡಾ.ಬಿ.ಆರ್.ಅಂಬೇಡ್ಕರರವರು ರಚಿಸಿದ ಭಾರತ ಸಂವಿಧಾನದಲ್ಲಿ ಭಾರತ ಎಲ್ಲ ನಾಗರಿಕರಿಗೆ ಸಮಾನತೆಯನ್ನು ಕಲ್ಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಭಾನುವಾರ ಪಟ್ಟಣದ ತಾಲೂಕು ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ದೇಶದಲ್ಲಿ ಅನೇಕ ರಾಜ್ಯ, ಭಾಷೆ, ಧರ್ಮ, ವೈವಿಧ್ಯಮ ಸಂಸ್ಕೃತಿಗಳಿಂದ ಕೂಡಿದ್ದರೂ, ನಾವೆಲ್ಲರೂ ಒಂದೇ ಎಂದು ಭಾವನೆಯಿಂದ ಕೂಡಿ ಬಾಳುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.
ತಹಶೀಲ್ದಾರ ಸುರೇಶ ಮುಂಜೆಯವರು ಧ್ವಜಾರೋಹಣ ನೆರವೇರಿಸಿದರು. ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ತಾ.ಪಂ.ಇಒ ಅರುಣ ಮಾಚಕನೂರ, ಸಿಪಿಐ ಬಿ.ಎಸ್.ಮಂಟೂರ, ಬಿಇಒ ಬಸವರಾಜಪ್ಪ ಆರ್., ಸಮಾಜ ಕಲ್ಯಾಣಾಧಿಕಾರಿ ವಿ.ಎಸ್.ಚಂದರಗಿ, ಪಿಡಬ್ಲೂಡಿ ಎಇಇ ಆರ್.ಬಿ.ಮನವಡ್ಡರ, ಟಿಎಚ್ಒ ಡಾ.ಎಸ್.ಎಮ್.ಪಾಟೀಲ, ಕೃಷಿ ಅಧಿಕಾರಿ ವಿನೋದ ಮಾವರಕರ, ಪರಮಾನಂದ ಮಂಗಸೂಳಿ, ಭಾರತಿ ಕಾಂಬಳೆ, ಕಲ್ಪನಾ ಕಾಂಬಳೆ, ವಿಶ್ವನಾಥ ಹಾರೂಗೇರಿ, ಬಸವರಾಜ ಕಾಂಬಳೆ, ವಿನಾಯಕ ಭಾಟೆ, ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ವಸಂತ ಹೊಸಮನಿ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ದೈಹಿಕ ಶಿಕ್ಷಣ ಪರೀವಿಕ್ಷಕ ಎಮ್.ಪಿ.ಜಿರಗ್ಯಾಳ ಸ್ವಾಗತಿಸಿ, ನಿರೂಪಿಸಿದರು. ಪಿ.ಎಸ್.ಶಾರಬಿದ್ರೆ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 