ಭಾರತೀಯ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿ: ಡಾ. ಸಿದ್ದಲಿಂಗಮ್ಮ
ಪರಂಪರೆಯ ಉಳಿವು ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರಾಚಾರ್ಯ ಡಾ. ಎಂ. ಎಸ್. ಯರಗೊಪ್ಪ
ಲೋಕದರ್ಶನ ವರದಿ
ಹಾವೇರಿ12: ಭಾರತೀಯ ಸಂಸ್ಕೃತಿ ಹಾಗೂ ಪರಂಪರೆ ಶ್ರೇಷ್ಠವಾಗಿದ್ದು, ವಿದೇಶಿಗರು ಭಾರತದ ಬಗ್ಗೆ ಕುತೂಹಲ ಹೊಂದಲು ಹಲವಾರು ವೈಶಿಷ್ಠ್ಯಗಳು ಕಾರಣವಾಗಿವೆ ಇಂತಹ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅದನ್ನು ಉಳಿಸುವ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂಬುದಾಗಿ ಸರಕಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ. ಬಿ. ಜೆ. ಸಿದ್ದಲಿಂಗಮ್ಮ ತಿಳಿಸಿದರು.
ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಹಾಗೂ ಹಾವೇರಿಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪರಂಪರೆ ಕೂಟವು ಆಯೋಜಿಸಿದ್ದ 'ಪರಂಪರೆಯ ಉಳಿವು' ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ಎಸ್. ಯರಗೊಪ್ಪ ಇತಿಹಾಸದ ಅರಿವು ಎಲ್ಲರಿಗೂ ಅಗತ್ಯವಾಗಿದ್ದು, ಉತ್ತಮ ಅಂಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳವಂತೆ ವಿದ್ಯಾಥರ್ಿಗಳಿಗೆ ಕರೆನೀಡಿದರು.
ಜಿಲ್ಲಾ ಪರಂಪರೆ ಕೂಟದ ಸಂಚಾಲಕ ಡಾ. ಶಿವಯೋಗಿ ಕೋರಿಶೆಟ್ಟರ ಪರಂಪರೆಕೂಟದ ಧ್ಯೇಯೊದ್ಯೇಶ ಹಾಗೂ ಕೈಗೊಳ್ಳಲಾದ ಚಟುವಟಿಕೆಗಳ ಕುರಿತು ವಿವರಿಸಿದರು. ಸಹನಾ ದ್ಯಾವಣ್ಣನವರ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಪ್ರೊ. ನಾಗರಾಜ ಮುಚ್ಚಟ್ಟಿ ಸ್ವಾಗತಿಸಿದರು. ಸುಶೀಲಾ ಬಡಿಗೇರ ವಂದಿಸಿದರು. ಲಿಂಗರಾಜ ಕುರುಬರ ನಿರೂಪಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 