ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರ್ಯಾಲಿಗೆ ಚಾಲನೆ.
International Day of Democracy: Bike rally kicks off.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರ್ಯಾಲಿಗೆ ಚಾಲನೆ.
ಕಾರವಾರ 14 :- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಕಾರವಾರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವರೆಗೆ ಸಂಚರಿಸುವ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಭಾನುವಾರ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಿತು.ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಮೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ಮತ್ತಿತರರು ಇದ್ದರು.ಉತ್ತರ ಕನ್ನಡ ಜಿಲ್ಲೆಯಿಂದ 10 ಮಂದಿ ಬೈಕ್ ರೈಡರ್ ಗಳು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೋಮವಾರ ಬೆಂಗಳೂರುನಲ್ಲಿ ನಡೆಯುವ ಬೈಕ್ ರ್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದು, ಈ ತಂಡದಲ್ಲಿ 3 ಮಂದಿ ಪೊಲೀಸ್ ಸಿಬ್ಬಂದಿಗಳು ಸಹ ಭಾಗವಹಿಸಿದ್ದು, ರೈಡರ್ ಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಸುರಕ್ಷಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 