ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ
International Namokara Mantra Day Celebration
ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ
ಹಾವೇರಿ 09 : ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ ಧ್ಯೇಯವಾಕ್ಯದೊಂದಿಗೆ ಹಾವೇರಿ ನಗರದ ಜೈನ ಮಂದಿರದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯಿಂದ 9-35ರವರೆಗೆ ಸತತ ಒಂದು ಗಂಟೆ 35 ನಿಮಿಷಗಳ ಕಾಲ ಣಮೋಕಾರ ಮಂತ್ರ ಪಠಣೆ ಮಾಡಲಾಯಿತು.ಈ ಣಮೋಕಾರ ಮಂತ್ರ ಪಠಣದಲ್ಲಿ ಸಮಾಜದ ಮುಂಡರಾದ ಅಧ್ಯಕ್ಷ ಚಂದ್ರನಾಥ ಕಳಸೂರ, ಭರತರಾಜ ಹಜಾರಿ, ಎಸ್.ಎ.ವಜ್ರಕುಮಾರ, ಸನತಕುಮಾರ ಕಳಸೂರ, ಭೂಪಾಲ ಹೋಳಗಿ, ಮಹಾವೀರ ಕಳಸೂರ, ಮಾಣಿಕಚಂದ ಲಾಡರ, ಪಸದ್ಮರಾಜ ಕಳಸೂರ, ವಿಜಯಕುಮಾರ ಸಾತಗೊಂಡ, ಚಿಕ್ಕ ಮಕ್ಕಳು ಸೇರಿದಂತೆ ಸಮಸ್ತ ಶ್ರಾವಕ ಮತ್ತು ಶ್ರಾವಕಿಯರು ಶ್ವೇತ ವರ್ಣದ ಬಟ್ಟೆ ಧರಿಸಿ ಭಾಗವಹಿಸಿದ್ದರು.ಇಂದು ಜಗತ್ತಿನಾದ್ಯಂತ ಏಕಾಲಕ್ಕೆ ಈ ಣಮೋಕಾರ ಮಂತ್ರ ಪಠಣ ಜರುಗಿತು. ವಿಶೇಷವಾಗಿ ದೆಹಲಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಸಹ ಣಮೋಕಾರ ಮಂತ್ರ ಪಠಣದಲ್ಲಿ ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 