ಪರೀಕ್ಷಾ ಕೇಂದ್ರಕ್ಕೆ ವಿಚಕ್ಷಕ ದಳ ಭೇಟಿ ನೀಡಿ ಪರೀಶೀಲನೆ
Invigilator visits exam center and inspects
ಪರೀಕ್ಷಾ ಕೇಂದ್ರಕ್ಕೆ ವಿಚಕ್ಷಕ ದಳ ಭೇಟಿ ನೀಡಿ ಪರೀಶೀಲನೆ
ಕಂಪ್ಲಿ 10: ಸ್ಥಳೀಯ ಕೊಟ್ಟಾಲ್ ರಸ್ತೆಯ ವಿನೂತನ ಮಹಿಳಾ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ 6ನೇ ಸೆಮಿಕ್ಷರ್ನ ಇತಿಹಾಸ ವಿಷಯದ ಪರೀಕ್ಷಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪರೀಕ್ಷಾ ವಿಚಕ್ಷಕ ದಳದ ಅಧ್ಯಕ್ಷರು ಮತ್ತು ಸದಸ್ಯರುಗಳು ಭೇಟಿ ನೀಡಿ, ಪರೀಶೀಲಿಸಿದರು. ನಂತರ ವಿಚಕ್ಷಕ ದಳದ ಅಧ್ಯಕ್ಷ ತಿರುಪತಿ ಹೆಚ್ ಮಾತನಾಡಿ, ಜೂ.2ರಿಂದ ಬಿಎ ಮತ್ತು ಬಿಕಾಂನ 2 ಮತ್ತು 4 ಹಾಗೂ 6ನೇ ಸೆಮಿಸ್ಟರ್ ಪರೀಕ್ಷೆಗಳು ಆರಂಭಗೊಂಡಿದ್ದು, ಮಂಗಳವಾರ ನಡೆದ ಇತಿಹಾಸ ವಿಷಯದ ಪರೀಕ್ಷೆ ಶಾಂತಿಯುತವಾಗಿ ಜರುಗಿದೆ. ಇಲ್ಲಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದಾಗ ವಿದ್ಯಾರ್ಥಿನಿಯರು ಸುಸೂತ್ರವಾಗಿ ಪರೀಕ್ಷೆ ಬರೆಯಲು ಸಿಸಿ ಕ್ಯಾಮರ ಸೇರಿದಂತೆ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಲ್ಲಿನ ಪರೀಕ್ಷೆಯಲ್ಲಿ ಯಾವುದೇ ನಕುಲು ಮಾಡಲು ಅವಕಾಶ ನೀಡದೇ, ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಕಂಡು ಬಂದಿದೆ. ಕಳೆದ ಎರಡು ಮೂರು ವರ್ಷಗಳಿಂದ ಪರೀಕ್ಷಾ ವಿಭಾಗದಲ್ಲಿ ಉತ್ತಮವಾದ ಆಡಳಿತವನ್ನು ಮಾಡಿಕೊಂಡು ಬಂದಿದಾರೆ. ಮತ್ತು ಸಕಾಲದಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಬ್ಯಾಸಕ್ಕೆ ಅನುಕೂಲ ಮಾಡಿಕೊಟ್ಟು, ಶಾಂತಿಯುತವಾಗಿ ಪರೀಕ್ಷೆಯೊಂದಿಗೆ ಉತ್ತಮ ಫಲಿತಾಂಶ ನೀಡಿ, ವಿದ್ಯಾರ್ಥಿನಿಯರಿಗೆ ಮುಂದಿನ ಉನ್ನತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು. ಈ ಸಂದರ್ಭದಲ್ಲಿ ವಿಚಕ್ಷಕ ದಳದ ಸದಸ್ಯರಾದ ಡಾ.ಬಸಮ್ಮ ಶಿಗ್ಗಾವಿ, ಸುಧಾಕರ್, ಪ್ರಾಚಾರ್ಯ ಬಿ.ಮದ್ದಾನೆಪ್ಪ ಇದ್ದರು. ಜೂ 002ಬಿ.ಎ.ಬಿ.ಕಾಂ ಸೆಮಿಸ್ಟರ್ ಪರೀಕ್ಷಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪರೀಕ್ಷಾ ವಿಚಕ್ಷಕ ದಳದ ಅಧ್ಯಕ್ಷ ತಿರುಪತಿ ಹಾಗೂ ಸದಸ್ಯರು ಭೇಟಿ ನೀಡಿ, ಪರೀಶೀಲಿನೆ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 