ಜಾತೆ:್ರ ಅದ್ದೂರಿಯಾಗಿ ಆಚರಿಸಲು ನಿರ್ಧಾರ
Jathe: Decision to celebrate in a grand manner
ಜಾತೆ:್ರ ಅದ್ದೂರಿಯಾಗಿ ಆಚರಿಸಲು ನಿರ್ಧಾರ
ಗದಗ 18: ತಾಲ್ಲೂಕಿನ ಸುಕ್ಷೇತ್ರ ಬಳಗಾನೂರಿನ ಘನಮೌನಿ, ತ್ರಿಕಾಲ ಜ್ಞಾನಿ, ಮೌನ ತಪಸ್ವಿ ಚಿಕೇನಕೊಪ್ಪದ ಶ್ರೀಚನ್ನವೀರ ಶರಣರ 30 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಇದೇ ಡಿ. 15 ರಂದು ಪೂರ್ವಬಾವಿ ಸಭೆ ಜರುಗಿತು.
ಈ ಸಭೆಯಲ್ಲಿ ಸುಕ್ಷೇತ್ರ ಬಳಗಾನೂರ ಶ್ರೀಮಠದ ಶಿವಶಾಂತವೀರ ಶರಣರು ಸಾನಿಧ್ಯವಹಿಸಿದ್ದರು. ಸಭೆಯಲ್ಲಿ ಶ್ರೀಮಠದ ಭಕ್ತರು, ಶರಣರ ಬಳಗದ ಹಿರಿಯರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ಫೆ. 4 ರಂದು ಜಾತ್ರಾ ಮಹೋತ್ಸವದ ಅಂಗವಾಗಿ ಜರುಗುವ ಸಾಮೂಹಿಕ ವಿವಾಹದಲ್ಲಿ ಅಸಕ್ತ ವಧು-ವರರ ಹೆಸರುಗಳನ್ನು ಜನವರಿ 28 ರಂದು 2025 ರ ಒಳಗಾಗಿ ನೋಂದಾಯಿಸಲು ಮೋ.ಸಂ. 8880808822, 9483661263 ಅವರನ್ನು ಸಂಪರ್ಕಿಸಬಹುದು. ವಿವಾಹಗಳ ದಾಖಲಾತಿಗಾಗಿ ಶ್ರೀಮಠದಲ್ಲಿ ಮಾತ್ರ ವಿವರವಾದ ಮಾಹಿತಿ ಪಡೆಯಬೇಕು ಎಂದು ಸುಕ್ಷೇತ್ರ ಬಳಗಾನೂರ ಶ್ರೀಮಠವು ಪ್ರಕಟಣೆಯಲ್ಲಿ ತಿಳಿಸಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 