ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಾಧ್ಯ
Justice is possible only through a CBI investigation
ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣ ಸಿಐಡಿಗೆ ವಹಿಸಿರುವುದು ಕಣ್ಣೊರೆಸುವ ತಂತ್ರವಷ್ಟೇ. ಪ್ರಾಮಾಣಿಕ ಅಧಿಕಾರಿಗಳಾಗಿದ್ದರೆ ಇಷ್ಟೊತ್ತಿಗಾಗಲೇ ಬಂಧಿಸಬೇಕಿತ್ತು. ಹತ್ತು ದಿನವಾದರೂ ಯಾವುದೇ ಬಂಧನವಾಗಿಲ್ಲ. ಸಿಐಡಿ ಮತ್ತು ನಮ್ಮ ಪೊಲೀಸರ ಮಧ್ಯೆ ಯಾವುದೇ ವ್ಯತ್ಯಾಸವಿಲ್ಲ. ಸಿಬಿಐಗೆ ತನಿಖೆ ವಹಿಸಿದರೆ ಮಾತ್ರ ನ್ಯಾಯ ಸಿಗಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ ಅಥವಾ ನ್ಯಾಯಧೀಶರ ಮೂಲಕ ತನಿಖೆ ಮಾಡಬೇಕು. ಸಿದ್ದರಾಮಯ್ಯ ಪಾದಯಾತ್ರೆ ಮಾಡಿ ಸಿಬಿಐ ತನಿಖೆ ಕೇಳಿದ್ದರು. ನಮಗೂ ನೂರಾರು ಮಾರ್ಗಗಳಿವೆ, ನಾವು ಕೋರ್ಟ್ ಮೂಲಕ ಸಿಬಿಐಗೆ ವಹಿಸುವಂತೆ ಒತ್ತಾಯ ಮಾಡುತ್ತೇವೆ ಎಂದರು.
ಇದೇ ವೇಳೆ ರೆಡ್ಡಿ ಅವರು ವಿಡಿಯೋ ಸಾಕ್ಷಿಗಳನ್ನು ಬಹಿರಂಗ ಮಾಡಿದರು. ಗಲಾಟೆ ನಡೆಯುವ ಮೊದಲು ಇಲ್ಲಿಂದ ತೆರಳುವಂತೆ ಸತೀಶ್ ರೆಡ್ಡಿಗೆ ಶ್ರೀರಾಮುಲು ತಿಳಿಸಿದ್ದರು. ಆದರೆ ಸತೀಶ್ ರೆಡ್ಡಿ ಮೇಲೆ ಬಿದ್ದು ಹೊಡೆಯಲು ಮುಂದಾಗಿದ್ದಾರೆ. ಶ್ರೀರಾಮುಲು ವಿರುದ್ದ ಅವಾಚ್ಯ ಶಬ್ಧ ಪ್ರಯೋಗ ಮಾಡಿ ನಿಂದನೆ ಮಾಡಿದ್ದಾರೆ. ಕೆಟ್ಟ ಪದ ಬಳಕೆ ಮಾಡಿ ಶ್ರೀರಾಮುಲುರನ್ನು ಕೊಲ್ಲಿ ಹೊಡೆಯಿರಿ ಎಂದಿರುವ ವಿಡಿಯೋವಿದೆ ಎಂದರು.
ಶ್ರೀರಾಮುಲು ಜಾತಿ ಬಳಸಿ ಸತೀಶ್ ರೆಡ್ಡಿ ಕೆಟ್ಟ ಪದ ಬಳಕೆ ಮಾಡಿದ್ದಾರೆ. ಮೊದಲೇ ಯೋಜನೆ ಮಾಡಿ ಬಂದಿರುವುದಕ್ಕೆ ಈ ವಿಡಿಯೋ ಸಾಕ್ಷಿ. ಮಧ್ಯಾಹ್ನ ಬ್ಯಾನರ್ ತೆಗೆಸಿದ ಬಳಿಕ ರಾತ್ರಿ ಬ್ಯಾನರ್ ಹಾಕಲು ಹೋಗೋಣ ಆಗ ಜಗಳ ಮಾಡೋಣ ಎಂದು ಪ್ಲಾನ್ ಮಾಡಿ ಬಂದಿದ್ದಾರೆ. ಶ್ರೀರಾಮುಲು ಮೇಲೆ ಫೈರಿಂಗ್ ಮಾಡಲಾಗಿಲ್ಲ, ಆದರೆ ನಾನು ಬಂದಾಗ ಫೈರಿಂಗ್ ಮಾಡಿದ್ದಾರೆ ಎಂದು ರೆಡ್ಡಿ ಹೇಳಿದರು.
ಭಯ ಇಲ್ಲದೇ ಇದ್ದಾಗ ಶಾಸಕರು ಹೀಗೆ ಮಾಡುತ್ತಾರೆ. ಶ್ರೀರಾಮುಲು ಅಂತಹಾ ನಾಯಕರ ವಿರುದ್ಧ ಸತೀಶ್ ರೆಡ್ಡಿ ಮಾತನಾಡುತ್ತಾನೆಂದರೆ ವ್ಯವಸ್ಥೆ ಏನಾಗಿದೆ? ಘಟನೆ ನಡೆದು ಈಗಾಗಲೇ ಹತ್ತು ದಿನವಾಗಿದೆ. ಸಿಐಡಿಯವರು ಇನ್ನೂ ಹತ್ತು ದಿನ ಕಳೆಯುತ್ತಾರೆ. ಯಾರ ಬಂಧನವಾಗಿಲ್ಲ. ಜನವರಿ 17 ಬೃಹತ್ ಹೋರಾಟ ಮಾಡುತ್ತೇವೆ ಎಂದು ಜನಾರ್ದನ ರೆಡ್ಡಿ ಹೇಳಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 