ಕಾಟಾಪುರ: ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ
Katapura: Crime Prevention Month awareness programme
ಹನುಮಸಾಗರ 28: ಸಮೀಪದ ಕಾಟಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮಕ್ಕೆ ಹನುಮಸಾಗರ ಪೊಲೀಸ್ ಠಾಣಾಧಿಕಾರಿ ಬಸಪ್ಪ ಹಾಗೂ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.ಈ ವೇಳೆ ಮಾತನಾಡಿದ ಠಾಣಾಧಿಕಾರಿ ಬಸಪ್ಪ ಅವರು, ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟಲು ಮಕ್ಕಳಲ್ಲಿಯೇ ಕಾನೂನು ಅರಿವು ಬೆಳೆಸುವುದು ಅತ್ಯಂತ ಅಗತ್ಯವೆಂದು ಹೇಳಿದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಂದ ದೂರವಿದ್ದು ಶಿಸ್ತುಬದ್ಧ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಅಪರಿಚಿತರೊಂದಿಗೆ ಅತಿಯಾದ ಸ್ನೇಹ, ಸಾಮಾಜಿಕ ಜಾಲತಾಣಗಳ ದುರುಪಯೋಗ ಮತ್ತು ಅನಗತ್ಯ ಮಾಹಿತಿಯ ಹಂಚಿಕೆಯಿಂದ ದೂರವಿರುವಂತೆ ಎಚ್ಚರಿಕೆ ನೀಡಿದರು. ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅವರು ಪೋಕ್ಸೋ ಕಾಯ್ದೆ ಕುರಿತು ವಿವರವಾಗಿ ಮಾಹಿತಿ ನೀಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು. ಯಾವುದೇ ಅಸಹಜ ವರ್ತನೆ, ದೌರ್ಜನ್ಯ ಅಥವಾ ಭಯ ಹುಟ್ಟಿಸುವ ಘಟನೆಗಳ ಬಗ್ಗೆ ಮಕ್ಕಳು ತಕ್ಷಣವೇ ಪಾಲಕರು, ಶಿಕ್ಷಕರು ಅಥವಾ ಪೊಲೀಸರಿಗೆ ತಿಳಿಸಬೇಕು ಎಂದು ಹೇಳಿದರು.
ಪೋಕ್ಸೋ ಕಾಯ್ದೆಯಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಳಿವೆ ಎಂಬುದನ್ನೂ ಅವರು ವಿವರಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರ ಶಿವಕುಮಾರ್ ಚಳಚಗುಡ್ಡ, ಶಿಕ್ಷಕ ಮಂಜುನಾಥ ಸಿನ್ನೂರ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಅಪರಾಧ ತಡೆಗೆ ಸಹಕರಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 