ಕಿತ್ತೂರ ಉತ್ತಮ ಪ್ರವಾಸಿ ತಾಣ: .ವಿಜಯಕುಮಾರ
Kittoor Best Tourist Destination: .Vijayakumar
ಕಿತ್ತೂರ ಉತ್ತಮ ಪ್ರವಾಸಿ ತಾಣ: .ವಿಜಯಕುಮಾರ
ಬೈಲಹೊಂಗಲ 28: ಕಿತ್ತೂರ ಚೆನ್ನಮ್ಮ ಕೋಟೆ ಸ್ಥಳ, ಬೈಲಹೊಂಗಲ ಚೆನ್ನಮ್ಮ ಸಮಾಧಿ ಸ್ಥಳವನ್ನು ಕಿತ್ತೂರ ಪ್ರಾಧಿಕಾರದಿಂದ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಬೇಕೆಂದು ಬೆಂಗಳೂರಿನ ಕನ್ನಡ ಹೋರಾಟಗಾರ ನಂ.ವಿಜಯಕುಮಾರ ಹೇಳಿದರು. ಅವರು ಬೈಲಹೊಂಗಲದ ವೀರರಾಣಿ ಕಿತ್ತೂರ ಚೆನ್ನಮ್ಮನ ಸಮಾಧಿ ಸ್ಥಳ ಮತ್ತು ಚನ್ನಮ್ಮನ ಕಿತ್ತೂರಿನ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿ, ಕಿತ್ತೂರಿನಲ್ಲಿರುವ ಅಳಿದುಳಿದ ಕೋಟೆಯನ್ನು ಸಂರಕ್ಷಿತ ಪ್ರದೇಶವಾಗಿ ಅಭಿವೃದ್ದಿಪಡಿಸಬೇಕು. ಚೆನ್ನಮ್ಮ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಸರಕಾರ ಘೋಷಿಸಬೇಕೆಂದರು.ಕನ್ನಡ ಅಂಕಿಗಳ ಪೋಷಕರು, ಹಿರಿಯ ಸಾಹಿತಿಗಳಾದ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸುರೇಶ ದೇಸಾಯಿ ಮಾತನಾಡಿ, ಬೈಲಹೊಂಗಲ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ದಿ ಮಾಡುತ್ತಿರುವದು ಶ್ಲಾಘನೀಯ. ಇಂದಿನ ಯುವಕರು ವೀರರಾಣಿ ಚೆನ್ನಮ್ಮ , ಬೆಳವಡಿ ಮಲ್ಲಮ್ಮ, ಸಂಗೋಳ್ಳಿ ರಾಯಣ್ಣನ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.ಇದೇ ವೇಳೆ ಕನ್ನಡ ಹೋರಾಟಗಾರ ನಂ.ವಿಜಯಕುಮಾರ ಅವರನ್ನು ಸತ್ಕರಿಸಲಾಯಿತು.ಬೈಲಹೊಂಗಲ ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷ ಸಿ.ವಾಯ್.ಮೆಣಸಿನಕಾಯಿ, ಸಾಹಿತಿ ಲಕ್ಷ್ಮಣ ಡೊಂಬರ, ಇನ್ನಿತರರು ಇದ್ದರು..
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 