ಕೂಡ್ಲಿಗಿ: ಆಕಸ್ಮಿಕ 6 ಕುರಿಗಳ ಸಾವು ಕುರಿಗಾರರಲ್ಲಿ ಆತಂಕ
ಲೋಕದರ್ಶನ ವರದಿ
ಕೂಡ್ಲಿಗಿ 15: ಪಟ್ಟಣ ಹೊರ ವಲಯದಲ್ಲಿನ ಸೊಲ್ಲಮ್ಮ ಆಲದ ಮರದ ಬಳಿ ಭಾನುವಾರ ಸಂಜೆ ಮೇಯುತ್ತಿದ್ದ 6 ಕುರಿಗಳು ಏಕಾ ಏಕಿ ಸಾವನ್ನಪ್ಪಿವೆ. ಇದರಿಂದ ಕುರಿಗಾರರು ಆತಂಕಗೊಂಡಿದ್ದಾರೆ.
ಪಟ್ಟಣದ ಸುಮಾರು 200 ಕುರಿಗಳು ಇದ್ದು, ಪಿ. ಕೊಟ್ರೇಶ್-1, ಬಂಗಿ ಕೊಟ್ರೇಶ್-2 ಹಾಗೂ ಸ್ವಾಮಯ್ಯನವರ ಹನುಮಂತಪ್ಪ ಅವರಿಗೆ ಸೇರಿದ 3 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಅಸ್ತವ್ಯಸ್ತಗೊಂಡಿವೆ. ವಿಷಯ ತಿಳಿದ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಹೆಚ್ಚು ಹಸಿರು ಹುಲ್ಲನ್ನು ತಿಂದಿದ್ದು, ಜೀರ್ಣವಾಗದೆ ಹೊಟ್ಟೆ ಉಬ್ಬರವಾಗಿ ಮೃತಪಟ್ಟಿದ್ದಾವೆ ಎಂದು ಪಶು ವೈದ್ಯರು ತಿಳಿಸಿದ್ದಾರೆ.
ಕುರಿಗಳ ಸಾವಿಗೆ ನಿಕರ ಮಾಹಿತಿ ನೀಡಿ, ಮುಂದೆ ವಹಿಸಬೇಕಾದ ಕ್ರಮಗಳ ಬಗ್ಗೆ ಕುರಿಗಾರರಿಗೆ ಮಾಹಿತಿ ಒದಗಿಸಬೇಕು ಎಂದು ಸ್ವಾಮಯ್ಯನವರ ನಾಗರಾಜ ಪಶು ಅವೈದ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 