ಕೊಪ್ಪಳ: ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಪಿಡಿಓ ಜಮೀಲ್ ಅಹ್ಮದ್ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 08: ಪಕ್ಕದ ಗೋವಾ ರಾಜ್ಯದ ಬಿಚ್ಚೋಲಿಯಂ ನಗರದಲ್ಲಿ ಇದೆ ತಿಂಗಳ ಜೂನ್ 16ರ ಭಾನವಾರದಂದು ಕನರ್ಾಟಕ ಜಾಗೃತಿ ವೇತಿಕೆ ಬೆಂಗಳೂರು ಹಾಗೂ ಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿ ಇವುಗಳ ಸಂಯುಕ್ತ ಅಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಜರುಗಲಿರುವ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಜಿಲ್ಲೆಯ ಕನಕಗಿರಿ ತಾಲೂಕಿನ ಹಿರೇಖೇಡ ಗ್ರಾಮ ಪಂಚಾಯತಿಯ ಪಿಡಿಓ ಜಮೀಲ್ ಅಹ್ಮದ್ ಗೆ ಪ್ರತಿಷ್ಠೀತ ಕರುನಾಡ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲು ನಿರ್ಣಯಿಸಲಾಗಿದೆ, ಎಂದು ವೇದಿಕೆಯ ಅಧ್ಯಕ್ಷ ಮಹೇಶ್ ಬಾಬು ಸುವರ್ೆ ತಿಳಿಸಿದ್ದಾರೆ.
ಜೂನ್16ರಂದು ಗೋವಾ ರಾಜ್ಯದ ಬಿಚ್ಚೋಲಿಯಂ ನಗರದ ಹೀರಾಬಾಯಿ ಹಾಲ್ ನಲ್ಲಿ ಜರುಗಲಿರುವ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾದಕರಿಗೆ ನೀಡುವ ಪ್ರಶಸ್ತಿ ಪ್ರಾಧನ ಸಮಾರಂಭದಲ್ಲಿ ಪಿಡಿಓ ಜಮೀಲ್ ಅಹ್ಮದ್ರವರ ಗ್ರಾಮೀಣ ಭಾಗದಲ್ಲಿನ ಉತ್ತಮ ಸೇವೆ ಹಾಗೂ ಸಾಮಾನ್ಯ ಜನರೊಂದಿಗೆ ಅವರ ಉತ್ತಮ ಕಾರ್ಯ ಹಾಗೂ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಕಾರ್ಯಕ್ರಮದ ಸಂಘಟಕರಾದ ಮಹೇಶ ಬಾಬು ಸುವರ್ೆ ಮತ್ತು ಶಿವ ಬಾಲ ಸ್ವಾಮಿರವರು ಜಂಟಿ ಪ್ರಕಟಣೆ ಮೂಲಕ ತಿಳಿಸಿ ಸಮ್ಮೇಳನದಲ್ಲಿ ಈ ಭಾಗದ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡು ಸರ್ವರನ್ನು ಸ್ವಾಗತಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 