ಪುದುಚೆರಿಯಲ್ಲಿ ಎರಡನೇ ದಿನವೂ ಕುಂಭದ್ರೋಣ ಮಳೆ ಮುಂದುವರಿಕೆ
ಪುದುಚೆರಿ, ಡಿ 1-ಪುದುಚೆರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡನೇ ದಿನವೂ ಧಾರಾಕಾರ ಮಳೆ ಮುಂದುವರೆದಿದ್ದು, ಭಾನುವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ.
ಪುದುಚೆರಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಬೀಳುತ್ತಿದೆ. ಈಶಾನ್ಯ ಮುಂಗಾರು ತೀವ್ರಗೊಂಡಿದ್ದರಿಂದ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೀರು ಪಂಪ್ ಮಾಡುವಲ್ಲಿ ಆಡಳಿತ ಯಂತ್ರ ನಿರತವಾಗಿದೆ. ಅನೇಕ ರಸ್ತೆಗಳು ನೀರಿನಲ್ಲಿ ಮುಳುಗಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ರಸ್ತೆಗಳೂ ಹಾನಿಗೊಂಡಿವೆ. ಭಾನುವಾರವಾದ್ದರಿಂದ ವಾಹನ ಸಂಚಾರ ಕಡಿಮೆ ಇತ್ತು. ಪುದುಚೆರಿಯ ಅನೇಕ ಕೆರೆ ಕುಂಟೆಗಳು ಭಾರೀ ಮಳೆಯಿಂದ ಬೇಗನೆ ತುಂಬುತ್ತಿವೆ.
ಭಾನುವಾರ ಬೆಳಿಗ್ಗೆ 8.30ರ ವೇಳೆಗೆ ಕಳೆದ 24 ತಾಸಿನಲ್ಲಿ ಪುದುಚೆರಿಯಲ್ಲಿ 11.4 ಸೆಂ.ಮೀ ಮಳೆಯಾಗಿದೆ. ಈ ಮಧ್ಯೆ, ವಿಳ್ಳುಪುರಂನ ವೀಡುರ್ ಅಣೆಕಟ್ಟೆಯ ಗೇಟ್ಗಳನ್ನು ಯಾವುದೇ ವೇಳೆ ತೆಗೆಯಬಹುದಾಗಿದ್ದರಿಂದ ಶಂಕರಾಭರಣಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ್ನಾಡಿಪೇಟ್ ಪಂಚಾಯಿತಿ ಆಡಳಿತ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 