ಕುರುಗೋಡು: 80 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ
ಲೋಕದರ್ಶನ ವರದಿ
ಕುರುಗೋಡು 25: ಪಟ್ಟಣ ಸಮೀಪದ ಗೆಣಿಕೆಹಾಳ್ ಗ್ರಾಮದ ಸಕರ್ಾರಿ ಪ್ರೌಢ ಶಾಲೆಯ ಪ್ರಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಮ್ಸಿ ಅದ್ಯಕ್ಷ ಎನ್ವೈ.ಗೋವಿಂದಪ್ಪ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಥರ್ಿಗಳಿಗೆ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ನೀಡಿದೆ, ಈ ಯೋಜನೆಗಳನ್ನು ವಿದ್ಯಾಥರ್ಿಗಳು ಉಪಯೋಗಿಸಿಕೊಂಡು ಶಾಲೆಯ ಕೀರ್ತಿ ತರುವ ಪ್ರಯತ್ನ ಮಾಡಬೇಕು ಎಂದರು.
ಗ್ರಾಪಂ. ಪಿಡಿಒ ಎ.ಮಂಜುನಾಥ ಮಾತನಾಡಿ, ವಿದ್ಯಾಥರ್ಿಗಳು ಸರ್ಕಾರ ನೀಡಿರುವ ಉಚಿತ ಸೈಕಲ್ಗಳನ್ನು ಶಾಲೆಗೆ ಮಾತ್ರ ಉಪಯೋಗಿಸಿ, ಆಲ್ಲದೆ ಖಾಸಗೀ ಕಾರ್ಯಗಳಿಗೆ ಎಂದೂ ಬಳಸಬಾರದು ಎಂದು ಸಲಹೆ ನೀಡಿದರು.
ನಂತರ 8ನೇ ತರಗತಿಯ 80 ವಿದ್ಯಾಥರ್ಿಗಳಿಗೆ ಉಚಿತ ಸೈಕಲ್ ವಿತರಿಸಿದರು.
ಗ್ರಾಪಂ. ಅಧ್ಯಕ್ಷ ಶಾಂತನಗೌಡ, ಶಾಲೆಯ ಪ್ರಭಾರಿ ಮುಖ್ಯಗುರು ಮಣ್ಣೂರು ಬಸವರಾಜ, ಎಸ್ಡಿಎಂಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು, ಶಿಕ್ಷಕರು, ಗ್ರಾಮದ ಮುಖಂಡರು ಹಾಗೂ ಮತ್ತಿತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 