ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
Launch of plate, bag collection campaign
ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
ತಾಳಿಕೋಟಿ: ಉತ್ತರ ಪ್ರದೇಶದ ಇಲಾಹಾಬಾದ ಜಿಲ್ಲೆಯ ಪ್ರಯಾಗರಾಜನಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ಮಹಾ ಕುಂಭ ಮೇಳಕ್ಕೆ ಆಗಸುವ ಭಕ್ತಾದಿಗಳಿಗೆ ಅನುಕೂಲವಾಗಲು ಪಟ್ಟಣದ ನಾಗರೀಕರು ತಟ್ಟೆ ಚೀಲ ಹಾಗೂ ಕಾಣಿಕೆ ಸಂಗ್ರಹ ಅಭಿಯಾನ ಬುಧವಾರ ಆರಂಭಿಸಿದರು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಚಾಲಕ ಮಲ್ಲಿಕಾರ್ಜುನ ಹಿಪ್ಪರಗಿಯವರು ಇಡೀ ಜಿಲ್ಲೆಯಾದ್ಯಂತ ಈ ಅಭಿಯಾನವು ನಡೆಯುತ್ತಿದೆ ತಾಳಿಕೋಟಿ ಪಟ್ಟಣದಲ್ಲಿಯೂ ನಾವು ಮನೆಮನೆಗೆ ತೆರಳಿ ಸುಮಾರು ಮೂರು ಸಾವಿರ ಊಟದ ತಟ್ಟೆ, ಲೋಟ, ಕೈಚೀಲ ಹಾಗೂ ಕಾಣಿಕೆಯನ್ನು ಸಂಗ್ರಹಿಸುತ್ತಿದ್ದೇವೆ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು. ಈ ಸಮಯದಲ್ಲಿ ಪುರಸಭೆ ಸದಸ್ಯರಾದ ವಾಸುದೇವ ಹೆಬಸೂರ, ಜಯಸಿಂಗ್ ಮೂಲಿಮನಿ, ರಾಜು ಹಂಚಾಟೆ, ರಾಜು ಸೊಂಡೂರ,ಬಂಡು ಧಾಯಪುಲೆ, ಶ್ರೀಧರ್ ದೇಶಪಾಂಡೆ, ಪದ್ಮರಾಜ ಅಗ್ರವಾಲ, ಪ್ರಮೋದ ಅಗಾರವಾಲ ಮುತ್ತೀತರರೂ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 