20 ಸಾವಿರ ಗಿಡ ನೆಡುವ ಯೋಜನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ 5 ಸಾವಿರ ಹೆರಿಗೆ ಮಾಡಿಸಿದ 107 ವಯಸ್ಸಿನ ಸೂಲಗಿತ್ತಿ ಪಣಿಯಮ್ಮಗೆ ಸನ್ಮಾನ
ಬೆಳಗಾವಿ: 25: ಲಕ್ಷ್ಮಿ ತಾಯಿ ಫೌಂಡೇಶನ್ ಮೂಲಕ ಈ ವರ್ಷ 20 ಸಾವಿರ ಗಿಡಗಳನ್ನು ನೆಡುವ ಯೋಜನೆ ಹಮ್ಮಿಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮರ್ಿಕರಿಗೆ 500 ಗಿಡಗಳನ್ನು ವಿತರಿಸುವ ಮೂಲಕ ಯೋಜನೆಗೆ ಚಾಲನೆ
ನೀಡಿದರು.
ಮಂಗಳವಾರ ಸಾಂಬ್ರಾಕ್ಕೆ ತೆರಳಿದ ಹೆಬ್ಬಾಳಕರ್, ಅಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ತೊಡಗಿರುವ ಕಾಮರ್ಿಕರಿಗೆ 500 ಗಿಡಗಳನ್ನು ವಿತರಿಸಿದ್ದಲ್ಲದೆ, ಅವರಿಗೆ ಊಟದ ವ್ಯವಸ್ಥೆ ಮಾಡಿ, ಅವರೊಂದಿಗೇ ಊಟ ಮಾಡಿದರು.
ಬರಬರುತ್ತ ಬರಗಾಲ ತೀವ್ರವಾಗುತ್ತಿದೆ. ಅಂತರ್ಜಲ ಕಡಿಮೆಯಾಗುತ್ತಿದೆ. ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುವುದಿಲ್ಲ. ಏನೇ ಆಸ್ತಿ ಮಾಡದಿದ್ದರೂ ಗಿಡಗಳನ್ನಾದರೂ ನೆಡುವ ಮೂಲಕ ಮುಂದಿನ ಪೀಳಿಗೆಗೆ ದೊಡ್ಡ ಆಸ್ತಿ ಮಾಡಿಟ್ಟು ಹೋಗಬೇಕು. ಹಾಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಡಬೇಕು ಎಂದು ಹೆಬ್ಬಾಳಕರ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾರಿಹಾಳ ಪೊಲೀಸ್ ಇನಸ್ಪೆಕ್ಟರ್ ವಿಜಯಕುಮಾರ ಸಿನ್ನೂರ್, ತಾಲೂಕ್ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ ದೇಸಾಯಿ, ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಸೂಲಗಿತ್ತಿ ಪಣಿಯಮ್ಮಗೆ ಸನ್ಮಾನ :
ಇದೇ ಸಂದರ್ಭದಲ್ಲಿ, ಈವರೆಗೆ 5 ಸಾವಿರಕ್ಕಿಂತ ಹೆಚ್ಚು ಹೆರಿಗೆ ಮಾಡಿಸಿರುವ 107 ವಯಸ್ಸಿನ ಸೂಲಗಿತ್ತಿ ಸಾಂಬ್ರಾದ ಪಣಿಮಾ ತಾನ್ಸೆವಾಲೆ ಅವರನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸನ್ಮಾನಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 