ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಐಹೊಳೆ ಭೂಮಿ ಪೂಜೆ
MLA Aihole Bhumi Pooja for road development work
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಐಹೊಳೆ ಭೂಮಿ ಪೂಜೆ
ಚಿಕ್ಕೋಡಿ, 04 : ರಾಯಬಾಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಗನೂರ ಗ್ರಾಮದಲ್ಲಿ ಅಭಿವೃದ್ಧಿಗೆ ವಿಶೇಷ ಆಧ್ಯತೆ ನೀಡಲಾಗಿದೆ. ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ತಾಲೂಕಿನ ಜಾಗನೂರ ಗುರುಕುಲ ರಸ್ತೆ ಹಾಗೂ ಜಾಗನೂರಹಿಪಾಮಲದಿನ್ನಿ ರಸ್ತೆಗೆ 80 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮೀಣ ರಸ್ತೆಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದ್ದು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿತ ಇಲಾಖೆ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.
ಇನ್ನೂ ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಸರ್ಕಾರ ಅನುದಾನ ನೀಡಿದ ಬಳಿಕ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತದೆ. ಗ್ರಾಮದ ಜನರ ಬೇಡಿಕೆಯಾದ ಜಾಗನೂರ-ಪಾಮಲದಿನ್ನಿ ರಸ್ತೆಗೆ 30 ಲಕ್ಷ ರೂ ಮತ್ತು ಜಾಗನೂರ-ಗುರುಕುಲ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ ಅನುದಾನ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಮಂಗಿ, ಗ್ರಾ.ಪಂ ಉಪಾಧ್ಯಕ್ಷ ಮಲ್ಲೇಶ ಹನಮಂತಗೋಳ,ಮಹೇಂದ್ರ ಖೇಮಲಾಪುರೆ, ಮಾರುತಿ ಹಮ್ಮಾರ, ಮುತ್ತೇಪ್ಪ ಮರಾಠೆ, ಲಕ್ಷ್ಮಣ ಹನಮನ್ನವರ, ಮಾಳಪ್ಪ ಗೋರಗುದ್ದಿ, ಪಿಕೆಪಿಎಸ್ ಅಧ್ಯಕ್ಷ ಹನುಮಂತ ಕರಿಕಟ್ಟಿ, ಉಪಾಧ್ಯಕ್ಷ ಮುತ್ತೇಪ್ಪ ಹನಮನ್ನವರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಕೋಶಾಧ್ಯಕ್ಷ ಸಿದ್ದು ಖಿಂಡಿ, ಪರಸಪ್ಪ ಹನಮನವರ, ಪಾಂಡುರಂಗ ಹಂಜಾನಟ್ಟಿ, ಹನುಮಂತ ರಬಕವಿ, ಮುತ್ಯಪ್ಪ ಕೇಸ್ತಿ, ಗೋಪಾಲ ನಾವಿ, ರಾಮಪ್ಪ ಗಿಡ್ಡಪಗೋಳ, ಶಿವಾನಂದ ಪಾಟೀಲ್, ನಾರಾಯಣ ನರಗುಂದ, ಸಂಜು ಮಾದರ, ಮಾಂತೇಶ್ ಶಿರೂಗೊರ್, ಶಿವರಾಜ ಗುಡಸ, ಲಕ್ಷ್ಮಣ ಆದರಗಿ, ಭೀಮರಾವ ಪೇಡರೆ, ಸುರೇಶ್ ಕೇಸ್ತಿ ಮತ್ತಿತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 