ಕಬ್ಬು ಬೆಳೆಗಾರ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಸಕ ರಾಜು ಕಾಗೆ
MLA Raju Kage expressed support for the struggle of sugarcane farmers
ಕಬ್ಬು ಬೆಳೆಗಾರ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಸಕ ರಾಜು ಕಾಗೆ
ಕಾಗವಾಡ 31: ಸಕ್ಕರೆ ಕರ್ಖಾನೆಗಳು ಕಬ್ಬಿಗೆ ಸೂಕ್ತ ಬೆಲೆ ನೀಡಬೇಕೆಂದು ಆಗ್ರಹಿಸಿ, ಮೂಡಲಗಿ ತಾಲೂಕಿನ ಗರ್ಲಾಪೂರ ಕ್ರಾಸ್ ಬಳಿ ನಡೆಸುತ್ತಿರುವ ಕಬ್ಬು ಬೆಳಗಾರ ರೈತರ ಪ್ರತಿಭಟನೆಗೆ ಕಾಗವಾಡ ಶಾಸಕ ರಾಜು ಕಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದಿ. 31 ರಂದು ಉಗಾರ ಖರ್ದ ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರ ರೈತರ ಬೇಡಿಕೆ ನ್ಯಾಯಯುತವಾಗಿದೆ. ಕಳೆದ ಅನೇಕ ರ್ಷಗಳಿಂದ ಮಾರುಕಟ್ಟೆಯಲ್ಲಿ ಬೀಜ, ರಸಗೊಬ್ಬರ, ಕೂಲಿ ಕರ್ಮಿಕರ ವೇತನ ಹೆಚ್ಚಾಗಿದೆ. ಇದಲ್ಲದೇ ಕಳೆದ ಐದಾರು ರ್ಷಗಳಿಂದ ಸಕ್ಕರೆ ಬೆಲೆ ಜಾಸ್ತಿಯಾದರೂ ಕರ್ಖಾನೆಗಳು ರೈತರು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ನೀಡುತ್ತಿಲ್ಲ. ರೈತರು ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ಮಾಡಿ, ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ ಸಕ್ಕರೆ ಕರ್ಖಾನೆಗಳು ಪ್ರತಿ ಟನ್ಗೆ ರೂ. 3500 ರಂತೆ ದರ ನೀಡಬೇಕೆಂದು ಒತ್ತಾಯಿಸುತ್ತಿವೆ. ರೈತರ ಬೇಡಿಕೆ ಸೂಕ್ತವಾಗಿದ್ದು, ಜಿಲ್ಲೆಯ ಕರ್ಖಾನೆಗಳು ರೈತರ ಕಬ್ಬಿಗೆ ರೂ. 3500 ಬೆಲೆ ನೀಡಿ. ರೈತರ ಹಿತ ಕಾಪಾಡುವ ಕೆಲಸ ಮಾಡಬೇಕು. ರೈತರ ಹೋರಾಟಕ್ಕೆ ನನ್ನ ಸಂಪರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.ಈ ಸಮಯದಲ್ಲಿ ಕಾಗವಾಡ ಮತಕ್ಷೇತ್ರದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 