ಮಹಾಯೋಗಿ ವೇಮನ ಜಯಂತಿ ಆಚರಣೆ
Mahayogi Veman Jayanti Celebration
ಕಾರವಾರ, ಜ.19 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಯೋಗದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ಕಾರವಾರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಆಚರಿಸಲಾಯಿತು.
ಅಂಕೋಲಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹೇಶ ಬಿ ನಾಯಕ ಮಹಾಯೋಗಿ ವೇಮನ ಕುರಿತು ವಿಶೇಷ ಉಪನ್ಯಾಸ ನೀಡಿ, ವೇಮನ ಕೆಟ್ಟದಾರಿಯನ್ನು ಹಿಡಿಯುವಾಗ ಅವನ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ತತ್ವ ಉಪದೇಶದಿಂದ ತನ್ನ ಬದುಕನ್ನು ಬದಲಾಯಿಸಿಕೊಂಡು, ಮಹಾಯೋಗಿಯಾಗಿ ಸಮಾಜಕ್ಕೆ ಅತ್ಯುತ್ತಮ ಸಂದೇಶವನ್ನು ತ್ರಿಪದಿಗಳ ಮೂಲಕ ಪ್ರಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಆತ್ಮ, ಮನಸ್ಸು ಶುದ್ದವಾಗಿರಬೇಕು. ನಾವು ಮಾಡುವ ಕಾಯಕದಲ್ಲಿ ಶ್ರದ್ಧೆಯಿಂದ ಮಾಡಿದರೆ ದೇವರನ್ನು ಕಾಣಬಹುದು, ನಡೆ, ನುಡಿಯಲ್ಲಿ ವ್ಯತ್ಯಸವಾಗಬರದು ತಂದೆ ತಾಯಿಗಳನ್ನು ದೇವರಂತೆ ಕಾಣಬೇಕು ಎಂದು ವೇಮನು ಹೇಳಿದ್ದಾರೆ. ಇಂತಹ ಹಲವು ಮಹಾನೀಯರ ಜಯಂತಿಗಳನ್ನು ಕೇವಲ ಒಂದು ದಿನಕ್ಕೆ ಸಿಮಿತವಾಗಿದೆ ಅವರು ನಡೆದು ಬಂದ ದಾರಿ, ಆಚಾರ ವಿಚಾರ, ನಡೆ ನುಡಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಜೀವನ ಸಾಗಿಸಲು ಸಾಧ್ಯ ಎಂದರು.
ಪ್ರಥಮ ದರ್ಜೆ ಮಾಹಿಳಾ ಕಾಲೇಜಿನ ಪ್ರಚಾರ್ಯ ವಿ.ಜಿ ಗಣೇಶ ಮಾತನಾಡಿ, ರ್ದುಮಾರ್ಗದಲ್ಲಿ ನಡೆಯುತ್ತಿದ್ದ ವೇಮನ, ಬದುಕು ಎಂಬುವುದು ನಶ್ವರವಾದುದ್ದು ಎಂದು ಅರಿತು ಉತ್ತಮ ಮಾರ್ಗದಲ್ಲಿ ನಡೆದು ಮಹಾಯೋಗಿಯಾಗಿ ಬದಲಾದನು. ಆಂಧ್ರ ಪ್ರದೇಶದ ಕಡಪದಲ್ಲಿ 2006 ರಲ್ಲಿ ವೇಮನ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗಿದೆ. ವೇಮನಂತಹ ಮಹಾನೀಯರ ಜಯಂತಿಗಳ ಆಚರಣೆಯ ಮೂಲಕ ನಮ್ಮಲ್ಲಿರುವ ಆಚಾರ, ವಿಚಾರ, ಕಲ್ಮಷಗಳನ್ನು ಬದಲಾಯಿಸಿಕೊಳ್ಳಲು ಸಾಧ್ಯವಾಗಿವೆ. ಮನಸ್ಸನ್ನು ಅಂಕುಶದಿಂದ ಹಿಡಿದಿಟ್ಟುಕೊಂಡು ಮೊಬೈಲ್ ನಿಂದ ದೂರ ಉಳಿದು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯ್ಕ ಸ್ವಾಗತಿಸಿದರು, ಸರ್ಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನ ಸಹಾಯಕ ಪ್ರಾದ್ಯಾಪಕಿ ಹೇಮಲತಾ ಕೆ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ವನಿತಾ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 