ಅಂಗವಿಕಲತೆ ಶಾಪವಲ್ಲ ವರವನ್ನಾಗಿಸಿಕೊಳಿ: ಅಡಿವೇಶ ಛಬ್ಬಿ
Make disability a boon not a curse: Adivesha Chabbi
ಅಂಗವಿಕಲತೆ ಶಾಪವಲ್ಲ ವರವನ್ನಾಗಿಸಿಕೊಳಿ: ಅಡಿವೇಶ ಛಬ್ಬಿ
ರನ್ನ ಬೆಳಗಲಿ 02: ಮುಧೋಳ ಸರಕಾರಿ ಪ್ರೌಢಶಾಲೆ ಮಹಾಲಿಂಗಪುರ ಶಾಲೆಯಲ್ಲಿ ದಿ. 31ರಂದು ಮಹಾಲಿಂಗಪುರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿಶೇಷ ಚೇತನ ಮಕ್ಕಳ ಫಿಜಿಯೋಥೆರಪಿ ಕಾರ್ಯಕ್ರಮ ಜರುಗಿತು.
ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಸಂಜಯ ರಾಥೋಡ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಅಡಿವೆಪ್ಪ ಛಬ್ಬಿ ಉದ್ಘಾಟಕರಾಗಿ ಮಾತನಾಡಿ ಅಂಗವಿಕಲತೆ ಶಾಪವಲ್ಲ ವರ ಎಂದು ಹೇಳಿದರು.
ನಮ್ಮ ನ್ಯೂನ್ಯತೆಯೇ ನಮ್ಮ ಶಕ್ತಿಯಾಗಬೇಕೆಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ಧನಂಜಯ್ ಕುಲಕರ್ಣಿ ತಿಳಿಸಿದರು.
ಪುರಸಭಾ ಸದಸ್ಯ ಚನ್ನಬಸು ಯರಗಟ್ಟಿ, ಫಿಜಿಯೋಥೆರಪಿ ನೀಡಿದ ಡಾಕ್ಟರ್ ಪಾಟೀಲ್ ಮೇಡಂ, ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಿ.ಆರ್. ಕ್ಯಾಡೀ, ಅಪ್ಸರ ಕೆಂಭಾವಿ, ಎ.ಎಮ್. ಮಂಚದ, ಅಭಿಯಂತರ ಎಚ್.ಪಿ. ರಾವಳ ಉಪಸ್ಥಿತರಿದ್ದರು. ಅನುಷ್ಠಾನಾಧಿಕಾರಿ ಬಿಎಮ್ ಮಂತ್ರಿ ನಿರೂಪಿಸಿದರು. ಸುಮಾರು 70ಕ್ಕೂ ಹೆಚ್ಚು ಅಂಗವಿಕಲ ಮಕ್ಕಳು ಫಿಜಿಯೋಥೆರಪಿ ಲಾಭ ಪಡೆದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 