ಮಲ್ಲಮ್ಮ ಜಯಂತಿ ನಿರಾಕರಣೆ: ಸಮಾಜ ಬಾಂಧವರಿಂದ ಧರಣಿ
Mallamma Jayanti rejection: Social activists stage protest
ಮಲ್ಲಮ್ಮ ಜಯಂತಿ ನಿರಾಕರಣೆ: ಸಮಾಜ ಬಾಂಧವರಿಂದ ಧರಣಿ
ಯರಗಟ್ಟಿ 11: ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲು ಅಧಿಕಾರಿ, ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಆರೋಪಿಸಿ ಶನಿವಾರ ರಾತ್ರಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ರೆಡ್ಡಿ ಸಮುದಾಯದ ಜನ ದಿಢೀರ್ ಧರಣಿ ನಡೆಸಿದರು. ಸರ್ಕಾರಿ ಕಚೇರಿ, ಶಾಲೆ, ಕಾಲೇಜು ಸೇರಿದಂತೆ ಸರ್ಕಾರಕ್ಕೆ ಸೇರಿದ ಎಲ್ಲ ಸ್ಥಳಗಳಲ್ಲೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಯರಗಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಈ ಆದೇಶ ಉಲ್ಲಂಘನೆ ಮಾಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಮಾಜದವರು ಆಗ್ರಹಿಸಿದರು. ಪಂಚಾಯಿತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಕೂಡ ಕರೆದಿಲ್ಲ. ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದ ಅಧಿಕಾರಿಗಳು ನಡೆ ಖಂಡನೀಯ ಎಂದು ಆಕ್ರೋಶ ಹೊರಹಾಕಿದರು. ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ನಿಖಿಲ ಪಾಟೀಲ, ಸಂತೋಷ ದೇವರಡ್ಡಿ, ಗೀರೀಶ ದೇವರಡ್ಡಿ, ವೆಂಕಟೇಶ ದೇವರಡ್ಡಿ, ವಿಶಾಲಗೌಡ ಪಾಟೀಲ, ಯಲ್ಲಪ್ಪಗೌಡ ಪಾಟೀಲ, ಗೀರಿಶ ಪಾಟೀಲ, ಗೋವಿಂದ ದೇವರಡ್ಡಿ, ನಾರಾಯಣ ಪಾಟೀಲ, ಸದಾನಂದ ಪಾಟೀಲ, ರಮೇಶ ಪಾಟೀಲ, ಕಿಟ್ಟು ತೋರಗಲ್ ಇತರರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 