ಕರ್ನಾಟಕ ತಂಡಕ್ಕೆ ಮಣಿಕಂಠ ಕಡಕೋಳ ಆಯ್ಕೆ
Manikantha Kadakola selected for Karnataka team
ದೇವರಹಿಪ್ಪರಗಿ 15: ಪಟ್ಟಣದ ಸಮೀಪವಿರುವ ನಮ್ಮೂರ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ 19 ವರ್ಷದೊಳಗಿನ ಟಿ.20 ಕ್ರಿಕೆಟ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾನೆ. ಗುಜರಾತ ಕ್ರಿಕೆಟ್ ಮಂಡಳಿ ಹಾಗೂ ಡಿಸಿಸಿಎನ್ ನವಸಾರಿ ಆಯೋಜಿಸುತ್ತಿರುವ ಸರ್ದಾರ್ ವಲ್ಲಭಾಯಿ ಪಟೇಲ ಅಖಿಲ ಭಾರತ ಅಂತರರಾಜ್ಯ 19 ವರ್ಷದೊಳಗಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ 2025ರ ರಾಜ್ಯ ತಂಡಕ್ಕೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಿಂದ ನಮ್ಮ ಮಕ್ಕಳ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಕ್ಕಳ ಪರ ಚಿಂತಕರು ಹಾಗೂ ಉಜ್ವಲ ಸಂಸ್ಥೆಯ ಮಾಜಿ ನಿರ್ದೇಶಕ ವಾಸುದೇವ ತೋಳಬಂದಿ, ಉಜ್ವಲ ಸಂಸ್ಥೆ ನಿರ್ದೇಶಕಿ ಸುನಂದಾ ತೋಳಬಂದಿ, ಧಾಮದ ಮುಖ್ಯ ಶಿಕ್ಷಕರಾಗಿದ್ದ ರಾವುತ ಮರಬಿ ತರಬೇತುದಾರಶ್ರೀಕಾಂತ ಕಾಖಂಡಕಿ ಸೇರಿದಂತೆ ವಿವಿಧ ಸಂಘಟನೆಗಳು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 