ಮಹಾವೀರ ಪತ್ತಿನ ಸಹಕಾರ ಸಂಘ ಅದ್ಯಕ್ಷರಾಗಿ ಮಂಜುನಾಥ ಜೈನ್ ಆಯ್ಕೆ
Manjunath Jain has been selected as the President of the Mahaveer Patta Cooperative Society
ಮಹಾವೀರ ಪತ್ತಿನ ಸಹಕಾರ ಸಂಘ ಅದ್ಯಕ್ಷರಾಗಿ ಮಂಜುನಾಥ ಜೈನ್ ಆಯ್ಕೆ
ಹೂವಿನ ಹಡಗಲಿ 21: ಮಹಾವೀರ ಅಲ್ಪಸಂಖ್ಯಾತರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಜೈನ್ ಆಯ್ಕೆ ಆಗಿದ್ದಾರೆ.ಶುಕ್ರವಾರ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಕೀಲರಾದ ಮಂಜುನಾಥ ಜೈನ್ ರವರು ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಆರ್. ಪುಷ್ಪಾವತಿ, ನೂತನ ನಿರ್ದೇಶಕರಾಗಿ ಆರ್ .ಬೊಮ್ಮಣ್ಣ, ಆರ್.ಯಶೋಧರ, ಎಂ. ಶಾಂತರಾಜು,ಡಾ. ಧರ್ಮಣ್ಣ, ಜೆ .ವಿಜಯಕುಮಾರ್ ,ಹೆಚ್.ಡಿ,ಅಜಿತ್,ಆಶಾ.ಪಿ, ಗುಂಜಲ್ ಆರ್, ಪ್ರಸನ್ನ ,ವಿಪುಲ್ ಜೈನ್ ,ಸುಜಿತ್ ಜೈನ್, ಮೇಘ ಜೈನರ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಮಂಜುನಾಥ್ ಮಾತನಾಡಿ ಸಂಘ ಸ್ವಂತ ಕಟ್ಟಡ ಹೊಂದಿದ್ದು, ಎಲ್ಲಾ ಸಮುದಾಯಗಳ ಬೆಂಬಲ ಹೊಂದಿದೆ.ವ್ಯವಹಾರಿಕವಾಗಿ ಉತ್ತಮ ಸ್ಥಿತಿಯಲ್ಲಿದೆ ಎಂದರು.ವೀರಣ್ಣ, ಶಾಂತರಾಜು ಮಾತನಾಡಿದರು.ಪತ್ತಿನ ಸಹಕಾರ ಸಂಘದ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳು ಮಾಜಿ ನಿರ್ದೇಶಕರುಗಳು ,ಶ್ರಾವಕ -ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 