ಇಂದು ಯರಗಟ್ಟಿಯಲ್ಲಿ ಮ್ಯಾರಥಾನ ಓಟ
Marathon run in Yaragatti today
ಇಂದು ಯರಗಟ್ಟಿಯಲ್ಲಿ ಮ್ಯಾರಥಾನ ಓಟ
ಯರಗಟ್ಟಿ 08: ಸ್ಥಳೀಯ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಪೃಥ್ವಿ ಸೆಂಟ್ರಲ್ ಸ್ಕೂಲನಿಂದ ಯರಗಟ್ಟಿ ಪಟ್ಟಣದಲ್ಲಿ ಮೊಟ್ಟಮೊದಲ ಭಾರಿಗೆ ಮುಕ್ತ ಮ್ಯಾರಥಾನ ಓಟ ಆಯೋಜಿಸಲಾಗಿದೆ. ಫೆ 9 ಭಾನುವಾರ ಬೆಳಿಗ್ಗೆ 6 ಘಂಟೆಗೆ ಪೃಥ್ವಿ ಸೆಂಟ್ರಲ್ ಶಾಲೆ ಆವರಣದಿಂದ ಪ್ರಾರಂಭವಾಗುವುದು. 10-16 ವರ್ಷದ ಯುವಕ ಯುವತಿಯರಿಗೆ, 16-30 ವರ್ಷದ ಪುರುಷ ಮಹಿಳೆಗೆ, 30-50 ವರ್ಷದ ಪುರುಷ ಮಹಿಳೆಯರಿಗೆ ಹಾಗೂ 50 ವರ್ಷ ಮೆಲ್ಪಟ್ಟ ಪುರುಷ ಮಹಿಳೆಯರಿಗೆ ಹೀಗೆ ಪ್ರತ್ಯೇಕ ನಾಲ್ಕು ವಿಭಾಗಳಾಗಿ ಮಾಡಲಾಗಿದ್ದು, ಪ್ರತಿ ವಿಭಾಗಕ್ಕೂ ಪ್ರಶಸ್ತಿ ನಿಗದಿ ಮಾಡಲಾಗಿದ್ದು, ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಿದ್ದಾರೆ. ಈ ಓಟದ ದೂರ ಒಟ್ಟು 5 ಕಿ.ಮೀ ಆಗಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಮಾರ್ಗಗಳನ್ನು ಸೂಚಿಸಲಾಗಿದೆ. ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ವಾಸಿಗಳು ಮಾತ್ರ ಇದರಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಜಿಪಂ ಮಾಜಿ ಸದಸ್ಯ ಅಜಿತಕುಮಾರ ದೇಸಾಯಿ ಮ್ಯಾರಥಾನಗೆ ಚಾಲನೆ ನೀಡಲಿದ್ದಾರೆ. ತಾಲೂಕು ದಂಡಾಧಿಕಾರಿ ಎಂ. ವಿ. ಗುಂಡಪ್ಪಗೋಳ, ಸಿಪಿಐ ಐ. ಎಂ. ಮಠಪತಿ, ಯುವ ಮುಖಂಡ ಪ್ರಕಾಶ ವಾಲಿ, ನಿವೃತ್ತ ಮುಖ್ಯಶಿಕ್ಷಕ ಎಸ್.ಎಸ್. ಕುರಬಗಟ್ಟಿಮಠ, ಮಾಜಿ ಸೈನಿಕ ಕುಮಾರ ಹಿರೇಮಠ, ಹೊಟೇಲ ಉದ್ಯಮಿ ರಾಜೇಶ ಶೆಟ್ಟಿ, ಕಸಾಪ ಅಧ್ಯಕ್ಷ ಟಿ.ಎಂ. ಕಾಮನ್ನವರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಆರೋಗ್ಯವೇ ಭಾಗ್ಯ ಎಂಬ ಮಾತು ಸಾರ್ವಕಾಲಿಕವಾಗಿದೆ. ಉತ್ತಮ ಆರೋಗ್ಯಕ್ಕಾಗಿ ನಡೆಯಲೇಬೇಕು ಎಂದು ಹೇಳುತ್ತಾರೆ ಈ ನಿಟ್ಟಿನಲ್ಲಿ ಯೋಗ, ಕ್ರೀಡೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಪ್ರಥಮ ಭಾರಿಗೆ ಮ್ಯಾರಥಾನ ಹಮ್ಮಿಕೊಂಡೆದ್ದೆವೆ. ಈ ಜಗತ್ತಿನಲ್ಲಿ ಸೋಲದೆ ಗೆದ್ದವರು ಯಾರು ಇಲ್ಲ, ಸೋತು ಗೆದ್ದವರೇ ಸಾಧಕರಾಗಿದ್ದಾರೆ. ಈ ನಿಟ್ಟಿನಲ್ಲಿ ಸ್ರೀ ಮತ್ತು ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 