ಮಾಸ್ಟರ್ ಹಿರಣ್ಣಯ್ಯರವರು ಕನ್ನಡ ನಾಡಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಗೋರಂಟ್ಲಿ
ಲೋಕದರ್ಶನ ವರದಿ
ಕೊಪ್ಪಳ 02: ಮಾಸ್ಟರ್ ಹಿರಣ್ಣಯ್ಯರವರು ಶ್ರೇಷ್ಠ ರಂಗಭೂಮಿ ಕಲಾವಿದರಾಗಿದ್ದರು. ರಂಗಭೂಮಿಗೆ ಹೊಸ ದಿಕ್ಕು ನೀಡಿದ್ದ ಅವರ ಅಗಲಿಕೆ ರಂಗಭೂಮಿ ಅಷ್ಟೆ ಅಲ್ಲದೇ ಕನ್ನಡ ನಾಡಿಗೆ ತುಂಬಲಾರದ ನಷ್ಟವೇಂದು ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಹೇಳಿದರು.
ಅವರು ತಾಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಸಾಹಿತ್ಯ ಪರಿಷತ್ತು ಕಾಯರ್ಾಲಯದಲ್ಲಿ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಮಾತನಾಡಿದರು.
ಅಂದಿನ ಕಾಲಘಟದಲ್ಲಿ ರಾಜಕೀಯ ಹಾಗೂ ಆಳುವ ಸರ್ಕಾರಗಳನ್ನು ರಂಗಭೂಮಿಯಲ್ಲಿ ವಿಡಂಬನೆ ಮಾಡುತ್ತಾ ಸಮಾಜದ ಅಂಕು-ಡೊಂಕುಗಳನ್ನ ತಿದ್ದಿದ್ದ ಮಹಾನ್ ಚೇತನ ಅವರಾಗಿದ್ದರು ಎಂದರು.
ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆವಹಿಸಿದ್ಧ ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿ ಅವರ ಕಾಲಘಟದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದವರು. ಆಳುವ ಸಕರ್ಾರಕ್ಕೆ ತಮ್ಮ ರಂಗಭೂಮಿ ಮೂಲಕವೇ ಎಚ್ಚರಿಸಿದ ವೀರರು ಎಂದರು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಸಂತೋಷ ದೇಶಪಾಂಡೆ, ತಾಲೂಕು ಕಸಾಪ ಅಧ್ಯಕ್ಷ ಗೀರಿಶ ಪಾನಘಂಟಿ, ಕಾರ್ಯದಶರ್ಿ ರಮೇಶ ತುಪ್ಪದ, ರಂಗ ಕಲಾವಿದರು ಹಾಗೂ ಶಿಕ್ಷಕರಾದ ಪ್ರಾಣೇಶ ಪೂಜಾರ, ವೈಶಂಪಾಯ, ನ್ಯಾಯವಾದಿ ಬಸವರಾಜ, ಯಲಬುಗರ್ಾ ತಾಲೂಕು ಕಸಾಪ ಅಧ್ಯಕ್ಷ ದೇವೇಂದ್ರಪ್ಪ ಜಲರ್ಿ, ಶಿವಕುಮಾರ ಕುಕನೂರ ಶಿವಪ್ಪ ಹಡಪದ, ರಾಮಚಂದ್ರ ಗೊಂಡಬಾಳ ಇತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 