ವಾಸವಿ ವಿದ್ಯಾಲಯದಲ್ಲಿ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ
Meaningful Raksha Bandhan celebration at Vasavi Vidyalaya
ವಾಸವಿ ವಿದ್ಯಾಲಯದಲ್ಲಿ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ
ಬಳ್ಳಾರಿ 09 : ನಗರದಲ್ಲಿರಕ್ಷಾ ಬಂಧನ ಹಬ್ಬವು ಸಹೋದರ -ಸಹೋದರಿಯರಆತ್ಮೀಯ ಬಾಂಧವ್ಯವನ್ನು ಹಿರಿಮೆಗೆರಿಸುವ ಪ್ರಮುಖ ಹಬ್ಬವಾಗಿದೆ. ರಕ್ಷಾ ಬಂಧನವು ನಮ್ಮ ಸಂಸ್ಕೃತಿಯಲ್ಲಿ ಕುಟುಂಬದ ಸಂಬಂಧಗಳ ಮಹತ್ವವನ್ನು ನೆನಪಿಸುತ್ತದೆ. ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಶಾಲೆಯಲ್ಲಿ ಸಂತೋಷದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಕೈಗೆ ರಾಖಿಕಟ್ಟಿ, ಸಹೋದರತ್ವ, ಸ್ನೇಹ, ಪ್ರೀತಿ ಮತ್ತು ಬಾಂಧವ್ಯದ ಮಹತ್ವವನ್ನು ಸಾರಿದರು.ಪ್ರತಿ ವರ್ಷದಂತೆ ಈ ವರ್ಷವು ಶ್ರೀ ವಾಸವಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ಬಳ್ಳಾರಿಯ ಕಂಟೋನ್ಮಂಟ್ರಸ್ತೆಯಲ್ಲಿರುವ ಶಾಂತಿಧಾಮದಲ್ಲಿರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.ನಿಷ್ಕಲ್ಮಷ ಮನಸ್ಸಿನ ವಿಶೇಷ ಮಕ್ಕಳ ಕೈಗೆ ರಾಖಿಕಟ್ಟಿ,ಅವರ ಪ್ರತಿಭೆಯನ್ನು ಮೆಚ್ಚಿ ಗೌರವಿಸಿದರು. ಈ ಮೂಲಕ ವಿದ್ಯಾರ್ಥಿಗಳು ಮಾನವೀಯತೆ,ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹಂಚಿಕೊಂಡರು.ಶ್ರೀ ವಾಸವಿ ಕಿಂಡರ್ಗಾರ್ಟನ್ ಮಕ್ಕಳು ತಮ್ಮ ಮುಗ್ಧ ನಗು ಹಾಗೂ ಮಮತೆಯಿಂದರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಪುಟ್ಟ ಬಾಲಕಿಯರು ಬಾಲಕರ ಕೈಗೆ ರಾಖಿಕಟ್ಟೆ, ಸಹೋದರ-ಸಹೋದರಿಯರ ಪ್ರೀತಿ ಮತ್ತು ಬಾಂಧವ್ಯದ ಸಂದೇಶವನ್ನು ಹಂಚಿಕೊಂಡರು.ಈ ಸಂಧರ್ಭದಲ್ಲಿ ಶಿಕ್ಷಕರು ಮಕ್ಕಳನ್ನು ಪ್ರೋತ್ಸಾಹಿಸಿದರು.ಶಾಲೆಯಲ್ಲಿ ಈ ರೀತಿಯ ಹಬ್ಬವನ್ನು ವಿದ್ಯಾರ್ಥಿಗಳೊಂದಿಗೆ ಆಚರಿಸುವುದು,ಅವರಿಗೆ ಹಬ್ಬಗಳ ಮಹತ್ವ ಹಾಗೂ ಮೌಲ್ಯಗಳನ್ನು ತಿಳಿಯಲು ಸಹಾಯಕವಾಗಿದೆ. ಶ್ರೀ ವಾಸವಿ ವಿದ್ಯಾಲಯದಲ್ಲಿ ನಡೆದರಕ್ಷಾ ಬಂಧನ ಹಬ್ಬದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ,ಸಹಕಾರ ಮತ್ತು ಸಂಸ್ಕೃತಿಯಅರಿವನ್ನು ಹೆಚ್ಚಿಸುತ್ತದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 