ಮೈಕ್ರೋ ಫೈನಾನ್ಸ್ ಕಿರುಕುಳ: ಆತ್ಮಹತ್ಯೆಗೆ ಶರಣಾದ ಮಹಿಳೆ
Microfinance harassment: Woman commits suicide
ಬೆಳಗಾವಿ 22: ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವಿವಾಹಿತ ಮಹಿಳೆ ಓರ್ವಳು ಗೋಡೆ ಮೇಲೆ ಡೆತ್ ನೋಟ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಆನಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರವ್ವ ನೀಲ್ಲಪ ಕೆಂಗಾನೂರ(36) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ತಂಗಿಯನ್ನ ಚೆನ್ನಾಗಿ ನೋಡಿಕೋ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ. ವಿವಿಧ ಮೈಕ್ರೋ ಫೈನಾನ್ಸ್ನಲ್ಲಿ 7ರಿಂದ 10 ಲಕ್ಷದವರೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ನಿಂದ ನಿರಂತರ ಕಿರುಕುಳ ಮಾಡಿರುವ ಆರೋಪ ಇರುವ ಹಿನ್ನೆಲೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆ ಆತ್ಮಹತ್ಯೆ ಹಿನ್ನೆಲೆ ಕುಟುಬಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 