ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮ
Milk Pilot Project Implementation Program
ವಿಜಯಪುರ 07: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ನಾಳೆ ನವೆಂಬರ್ 8 ರಂದು ಶನಿವಾರ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಶನಿವಾರ ಮಧ್ಯಾಹ್ನ 12.30 ಗಂಟೆಗೆ ನಗರದ ಬಿ.ಎಲ್.ಡಿ.ಇ ಸಂಸ್ಥೆ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿರುವ ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಸ್ಪತ್ರೆಯಲ್ಲಿ ಬೆಂಗಳೂರಿನ ಆಶ್ರಯ ಹಸ್ತಾ ಟ್ರಸ್ಟ್ ವತಿಯಿಂದ ರೂ.1.50 ಕೋಟಿ ಧನ ಸಹಾಯದಿಂದ ಹೈದರಾಬಾದನ ಸುಶೇನಾ ಹೆಲ್ತ್ ಫೌಂಡೇಶನ್ ಸಹಯೋಗದಲ್ಲಿ ನಿರ್ಮಿಸಿರುವ ಧಾತ್ರಿ ಹಾಲುಣಿಸುವಿಕೆ ನಿರ್ವಹಣೆ ಕೇಂದ್ರ ಮತ್ತು ಮಿಲ್ಕ್ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಧನ್ಯವಾದಗಳು.ಡಾ. ಮಹಾಂತೇಶ ಬಿರಾದಾರ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 