ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ: ಸಚಿವ ನಾರಾಯಣಗೌಡ ಸ್ಪಷ್ಟನೆ
ಬೆಂಗಳೂರು, ಮೇ 28,ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.ನಿನ್ನೆ ಮಂಡ್ಯದಲ್ಲಿ ತಾವು ಆಡಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು 14 ಜನ ಸೇರಿ ಅಲ್ಲಿ ಸಭೆ ಮಾಡಿದ್ದರು. ಈ ವೇಳೆ ಮಾವಿನ ಹಣ್ಣನ್ನು ಕಟ್ ಮಾಡಿ ಹಂಚಿಕೊಂಡು ತಿಂದಿದ್ದರು. ಇದರಿಂದಾಗಿ ಅವರೆಲ್ಲರಿಗು ಪರಸ್ಪರ ಸೋಂಕು ಹರಡಿರಬಹುದು ಎಂದೂ, ಅವರನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದೆ. ಮಾವಿನ ಹಣ್ಣಿನಿಂದ ಕೊರೋನಾ ಬರಲ್ಲ. ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 