ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ: ಸಚಿವ ನಾರಾಯಣಗೌಡ ಸ್ಪಷ್ಟನೆ
ಬೆಂಗಳೂರು, ಮೇ 28,ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.ನಿನ್ನೆ ಮಂಡ್ಯದಲ್ಲಿ ತಾವು ಆಡಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು 14 ಜನ ಸೇರಿ ಅಲ್ಲಿ ಸಭೆ ಮಾಡಿದ್ದರು. ಈ ವೇಳೆ ಮಾವಿನ ಹಣ್ಣನ್ನು ಕಟ್ ಮಾಡಿ ಹಂಚಿಕೊಂಡು ತಿಂದಿದ್ದರು. ಇದರಿಂದಾಗಿ ಅವರೆಲ್ಲರಿಗು ಪರಸ್ಪರ ಸೋಂಕು ಹರಡಿರಬಹುದು ಎಂದೂ, ಅವರನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದೆ. ಮಾವಿನ ಹಣ್ಣಿನಿಂದ ಕೊರೋನಾ ಬರಲ್ಲ. ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 