ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ?:ವಾಟಾಳ್ ಕರೆಗೆ ಮೌನ ಬೆಂಬಲ ನೀಡಿದ ಜನತೆ
Mixed reaction to Karnataka bandh?: People silently support Vatal's call
ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ?:ವಾಟಾಳ್ ಕರೆಗೆ ಮೌನ ಬೆಂಬಲ ನೀಡಿದ ಜನತೆ
ಕಾರವಾರ. 22; ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆಕಾರವಾರ : ಉತ್ತರ ಕನ್ನಡದಲ್ಲಿ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಟಾಳ್ ನಾಗರಾಜ್ ಅವರು ಎಂಇಎಸ್ ಕಾಟದ ವಿರುದ್ಧ ನೀಡಿದ ಬಂದ್ ಕರೆಗೆ ಉತ್ತರ ಕನ್ನಡದಲ್ಲಿ ಜನತೆ ಮೌನ ಬೆಂಬಲ ನೀಡಿದರು. ಯಾವುದೇ ಕನ್ನಡ ಸಂಘಟನೆಗಳು ಬಂದ್ ಸಂಬಂಧ ಪ್ರತಿಭಟನೆ, ಮೆರವಣಿಗೆ ಮಾಡದಿದ್ದರೂ ಸಹ, ಬಂದ್ ವಾತಾವರಣ ಕಂಡು ಬಂತು. ಕುಮಟಾ, ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ ಸೇರಿದಂತೆ ಘಟ್ಟದ ಮೇಲಿನ ತಾಲೂಕಿನಲ್ಲಿ ಜನ ಸಂಚಾರ ವಿರಳವಾಗಿತ್ತು. ಕಾರವಾರದಿಂದ ರಾಜ್ಯದ ಎಲ್ಲಾ ಪ್ರಮುಖ ಕೇಂದ್ರ ಗಳಿಗೆ ತೆರಳುವ ಬಸ್ ಬಸ್ ಗಳು ಎಂದಿನಂತೆ ಸಂಚರಿಸಿದವು. ನಾಲ್ಕನೇ ಶನಿವಾರ ಆದ ಕಾರಣ ಸರ್ಕಾರಿ ನೌಕರರ ಓಡಾಟ ಕಾಣಲಿಲ್ಲ. ಎಸ್ ಎಸ್ ಎಲ್ ಸಿ ಪರೀಕ್ಷೆ ಶನಿವಾರ ಇಲ್ಲದ ಕಾರಣ, ವಿದ್ಯಾರ್ಥಿಗಳ ಸಂಚಾರವೂ ಇರಲಿಲ್ಲ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳದಲ್ಲಿ ಹೋಟೆಲ್ ಅಂಗಡಿಗಳು ತೆರೆದ್ದವು. ಕರಾವಳಿಯಲ್ಲಿ ಬಸ್ ಸಂಚಾರ ಎಂದಿನಂತೆಯೇ ಇತ್ತು. ಅಂಗಡಿ ಮುಂಗಟ್ಟು ಮಧ್ಯಾಹ್ನದ ನಂತರ ತೆರೆದಿದ್ದವು . ಪೊಲೀಸ್ ಮೂಲಗಳ ಪ್ರಕಾರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಮಾಹಿತಿ ನೀಡಿವೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 