ನನ್ನನ್ನು ಅತಿ ಹೆಚ್ಚು ಟೀಕಿಸಿದವರಿಗೆ ಮೋದಿ, ಶಾ ಬಹುಮಾನ ನೀಡುವುದಾಗಿ ಹೇಳಿರಬೇಕು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು,22 ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂಬ ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಈ ರೀತಿ ಸಿದ್ದರಾಮಯ್ಯ ತಿವಿದಿದ್ದಾರೆ. ಬಿಜೆಪಿ ನಾಯಕರಾದ ಡಿ.ವಿ.ಸದಾನಂಗ ಗೌಡ, ವಿ.ಸೋಮಣ್ಣ ಸೇರಿದಂತೆ ಇತರ ನಾಯಕರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಟೀಕಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ಪಕ್ಷದ ಅಭ್ಯಥರ್ಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 