ಕಳೆದ ಬಾರಿಗಿಂತಲೂ ಅಧಿಕ ಬಹುಮತ: ಶೆಟ್ಟರ ವಿಶ್ವಾಸ
ಘಟಪ್ರಭಾ 18: ದೇಶದಲ್ಲಿ ಪ್ರಧಾನಿ ಮೋದಿ ಅಲೆ ಬೀಸುತ್ತಿದ್ದು ಕಳೆದ ಬಾರಿ 2014 ರ ಚುನಾವಣೆಗಿಂತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರು ಆಯ್ಕೆಯಾಗುತ್ತಾರೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಗುರುವಾರ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತುರುವ ಸಂದರ್ಭದಲ್ಲಿ ಅರಭಾಂವಿ ಮಠದ ಪ್ರಭುದೇವ ಪೆಟ್ರೋಲಿಯಂ ಹತ್ತಿರ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಅತಿ ಹೆಚ್ಚು ಸಂಸದರು ಆಯ್ಕೆಯಾಗುವ ಮೂಲಕ ಸಮ್ಮಿಶ್ರ ಸಕರ್ಾರ ಪತನಗೊಂಡು ಬಿಜೆಪಿ ಸಕರ್ಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿಭಾಗ ಪ್ರಭಾರಿ ಈರಣ್ಣ ಕಡಾಡಿ ಮಾತನಾಡಿ, ಜಿಲ್ಲೆಯ ಬೆಳಗಾವಿ ಹಾಗೂ ಚಿಕ್ಕೋಡಿ ಸಂಸದರು ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುತ್ತಾರೆ ಎಂದರು. ನೀಲಕಂಠ ಕಪ್ಪಲಗುದ್ದಿ, ಬಸವರಾಜ ಕಡಾಡಿ, ಬಸವರಾಜ ಹುಡೇದ, ಪರಪ್ಪ ಗಿರೆಣ್ಣವರ, ಪುಂಡಲಿಕ ಅರಭಾಂವಿ, ಕುಸುಮಾ ಖನಗಲ್ಲಿ, ಕೃಷ್ಣಪ್ಪ ಮುಂಡಿಗನಾಳ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 