ತಾಯಿಯ ಎದೆಯ ಹಾಲು ಶ್ರೇಷ್ಠವಾದದ್ದು: ಅಂಗನವಾಡಿಯ ಮೇಲ್ವಿಚಾರಕಿ ನಾಯಕ
ಲೋಕದರ್ಶನ ವರದಿ
ಯಲಬುರ್ಗ 04: ಪ್ರತಿಯೊಬ್ಬ ತಾಯಿಯ ಎದೆ ಹಾಲು ಮಕ್ಕಳಿಗೆ ಅತ್ಯಂತ ಶ್ರೇಷ್ಠವಾದದ್ದು ಆದ್ದರಿಂದ ತಾಯಂದಿರು ಮಕ್ಕಳಿಗೆ ತಪ್ಪದೆ ಎದೆಯ ಹಾಲನ್ನು ಉಣಿಸಬೇಕು ಎಂದು ಅಂಗನವಾಡಿಯ ಮೆಲ್ವೀಚಾರಕಿ ಲಲಿತಾ ನಾಯಕ ಹೇಳಿದರು.
ತಾಲೂಕಿನ ಬಸಾಪೂರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಾಯಂದಿರು ಹಾಗೂ ಮಕ್ಕಳಿಗೆ ಹಲವಾರು ಯೋಜನೆಗಳಿದ್ದು ಅವುಗಳನ್ನು ಎಲ್ಲಾ ತಾಯಂದಿರು ಪ್ರಯೋಜನ ಪಡೆದುಕೊಳ್ಳಬೇಕು ನಿಮ್ಮ ಆರೋಗ್ಯದ ಜೋತೆಗೆ ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಹಾಗೂ ಹೆಚ್ಚು ಹೆಚ್ಚು ಹಸಿರು ತರಕಾರಿಯನ್ನು ಬಳಸಬೇಕು ಮತ್ತು ಮೊಳಕೆ ಹೊಡೆದ ನೆನೆಸಿದ ಕಾಳುಗಳನ್ನು ತಿನ್ನಬೇಕು ಇದರಿಂದ ರಕ್ತಹಿನತೆ ಮತ್ತು ಮಕ್ಕಳಲ್ಲಿರುವ ಅಪೌಷ್ಠಿಕತೆ ದೂರವಾಗುತ್ತದೆ ಎಂದರು,
ಡಾ, ಅಂಜುಮ್ತಾಜ್ ತಾಯಿಯ ಎದೆ ಹಾಲಿನ ಮಹತ್ವದ ಬಗ್ಗೆ ವಿವಿರವಾಗಿ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಶರಣಪ್ಪ, ಆರೋಗ್ಯ ಸಹಾಯಕಿ ಈರಮ್ಮ, ಅಂಗನವಾಡಿ ಕಾರ್ಯಕತರ್ೆ ವಿಜಯಲಕ್ಷ್ಮೀ ಸೇರಿದಂತೆ ಅನೇಕ ಮಕ್ಕಳು ಹಾಗೂ ತಾಯಂದಿರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 