ಮುಧೋಳರಿಗೆ ರಾಷ್ಟ್ರಪತಿ ಪದಕ ಸನ್ಮಾನ
ಲೋಕದರ್ಶನ ವರದಿ
ಸಂಕೇಶ್ವರ 28: ಜ. ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಎಂ ಬಿ ಮುಧೋಳ ಇವರಿಗೆ ರಾಷ್ಟ್ರಪತಿ ಪದಕವನ್ನು ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಭವನದಲ್ಲಿ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರ ಹಸ್ತದಿಂದ ಪದಕ ಪ್ರಧಾನ ಮಾಡಿ ಗೌರವಿಸಲಾಯಿತು. ಸಂಕೇಶ್ವರ ಅಗ್ನಿಶಾಮಕ ಠಾಣೆಯ ವತಿಯಿಂದ ಸೋಮವಾರ ದಿ.28ರಂದು ಅಗ್ನಿಶಾಮಕ ಠಾಣೆಯ ಸಹಾಯಕ ಅಧಿಕಾರಿ ಆರ್ ಎಮ್ ಪುಜಾರಿ ಇವರು ಅಧಿಕಾರಿ ಎಂ.ಬಿ.ಮುಧೋಳ ಇವರಗೆ ಪುಷ್ಪಹಾರ ನೀಡಿ ಮತ್ತು ಸಿಬ್ಬಂದಿಗಳಿಂದ ಶಾಲ ಹಣ್ಣು ನೀಡಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡುತ್ತ ಎಂ ಬಿ ಮುಧೋಳ ಅಗ್ನಿಶಾಮಕ ಜವಾನರು ತಮ್ಮ ಸೇವೆಯಲ್ಲಿ ಪ್ರಾಮಾಣಿಕ ದಕ್ಷತೆಯಿಂದ ಸೇವೆ ಸಲ್ಲಿಸಿ ಠಾಣೆಯ ಹೆಸರಿಗೆ ಗೌರವ ತರಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 