ಮುಗಳಖೋಡ : ಕೃಷಿ ಅಭಿಯಾನ-2019 ಇಲಾಖೆಯ ನಡೆ ರೈತರ ಮನೆಯ ಬಾಗಿಲ ಕಡೆ
ಮುಗಳಖೋಡ 03; ಪಟ್ಟಣದ ಯಲಾಲ್ಲಿಂಗೇಶ್ವರ ಮಠದ ಆವರಣದಲ್ಲಿ ಇಂದು ಕುಡಚಿ ಹೋಬಳಿ ಮಟ್ಟದ ಸಮಗ್ರ ಕೃಷಿ ಮಾಹಿತಿ ಅಭಿಯಾನಕ್ಕೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಉದ್ಘಾಟಿಸಿ ಚಾಲನೆ ನೀಡಿದರು.
ಕೇಂದ್ರ ಸರಕಾರದಿಂದ ವಿವಿಧ ಬೆಳೆಗಳಿಗೆ ಕನಿಷ್ಠ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡೆದುಕೊಳಬೇಕು ಮತ್ತು ಕೃಷಿಯನ್ನು ಒಂದು ಉದ್ಯಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರ ಸದಾ ರೈತರ ಹಾಗೂ ಕೃಷಿ ಇಲಾಖೆ ಜೊತೆ ಇರುವುದಾಗಿ ತಿಳಿಸಿದರು.
ಕುಡಚಿ ಶಾಸಕ ಪಿ.ರಾಜೀವ ರವರು ಕೃಷಿ ಅಭಿಯಾನವನ್ನು ಪ್ರತಿಯೊಬ್ಬ ರೈತರ ಸಮಸ್ಯಗಳಿಗೆ ಪರಿಹಾರ ನೀಡುವಂತಾಗಬೇಕು. ಸಮಗ್ರ ಕೃಷಿ ಅಭಿಯಾನದ ಸದುಪಯೋಗವನ್ನು ಪ್ರತಿಯೊಬ್ಬ ರೈತರ ಪಡೆದುಕೊಂಡು ಕೃಷಿಯಲ್ಲಿ ತಮ್ಮ ಆಥರ್ಿಕ ಮಟ್ಟ ಹೆಚ್ಚಿಸಿಕೊಳ್ಳಲು ತಿಳಿಸಿದರು.
ಸಹಾಯಕ ನಿದರ್ೆಶಕ ಎಮ್. ಸಿ. ಮಣ್ಣಿಕೇರಿ ಮಾತನಾಡಿ ಸಮಗ್ರ ಕೃಷಿ ಅಭಿಯಾನ ಯೋಜನೆ ಅಡಿಯಲ್ಲಿ ಸಹೋದರ ಇಲಾಖೆಗಲಾದ ತೋಟಗಾರಿಕೆ. ರೇಷ್ಮೆ ಇಲಾಖೆ. ಅರಣ್ಯ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಪ್ರತಿ ಒಂದು ಗ್ರಾಮ ಪಂಚಾಯತಿಗಳಿಗೆ ಭೇಟಿನೀಡಿ ತಮ್ಮ ತಮ್ಮ ಇಲಾಖೆಗಳ ಸೌಲಭ್ಯಗಳ ಬಗ್ಗೆ ತಿಳಿಸಿ ಸ್ಥಳಿಯ ಸಮಸ್ಯೆಗಳಿಗೆ ಪರಿಹಾರ ನೀಡುವರು.
ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಕೃಷಿ ಅಧಿಕಾರಿ ರಘುನಾಥ ಪಾಟೀಲ, ತೋಟಗಾರಿಕೆ ಇಲಾಖೆ ಅಧಿಕಾರಿ ಈರಣ್ಣ ಬಟ್ಟಕುರಿಕಿ, ಹಾಗೂ ಎಸ್.ಕೆ.ಕುಂಬಾರ, ಎಮ್.ಸಿ.ಶೇಟಗಾರ, ಟಿ.ಎಸ್.ಪವಾರ, ಡಿ.ಡಿ.ಪಾರ್ಥನಳ್ಳಿ, ಎಸ್.ಎಮ್.ಹೊನ್ನಳಿ, ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 