ಯುವಕನ ಕೊಲೆ :ಚೀಲದಲ್ಲಿ ಮೃತ ದೇಹ ಪತ್ತೆ
Murder of a young man: Dead body found in a bag
ಲೋಕದರ್ಶನ ವರದಿ
ಹೂವಿನಹಡಗಲಿ 05: ಯುವಕನ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹಾಕಿದ ಪ್ರಕರಣ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಕುರಿ ಕಾಯುವ ಕೆಲಸ ಮಾಡುತ್ತಿದ್ದ ಬೀರೇಶ (25) ಕಳೆದ ಎರಡು ವಾರಗಳಿಂದ ಕಾಣೆಯಾಗಿದ್ದರು. ಬುಧವಾರ ಸಂಜೆ ಬೀರೇಶ ಅವರ ಮನೆಯ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಾಣಿ ಸತ್ತಿರುವ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಗಮನಿಸಿದಾಗ, ಒಂದು ಚೀಲ ಕಂಡು ಬಂದಿದ್ದು, ಅದನ್ನು ತೆರೆದಾಗ ಬೀರೇಶ ಅವರ ದೇಹದ ಭಾಗಗಳು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರು ಹಿರೇಹಡಗಲಿ ಪೊಲೀಸಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್.ಜಾಹ್ನವಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 