ಮುತ್ತಲಮರಿ: ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ಹಳಿಯಾಳ: ಮುತ್ತಲಮರಿ ಗ್ರಾಮದಿಂದ ಕಿವಡೆಬೈಲ್ ಸಂಪರ್ಕ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆ ಊರಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುತ್ತಲಮುರಿಯ ನೂರಾರು ರೈತರು ಸೋಮವಾರ ತಾಲೂಕ ಕಚೇರಿಗೆ ಬಂದು ತಮ್ಮ ಹೊಲಗಳಿಗೆ ತೆರಳುವ ರಸ್ತೆ ಸಮಸ್ಯೆಯ ಬಗ್ಗೆ ತಹಶೀಲ್ದಾರರಿಗೆ ವಿವರಿಸಿದರು. ಕಿವಡೆಬೈಲ್ ಭಾಗದಲ್ಲಿ ತಮ್ಮ ಊರಿನ ರೈತರ ಹೊಲ-ಗದ್ದೆಗಳಿವೆ. ನಿತ್ಯ ಹೊಲ-ಗದ್ದೆಗಳಿಗೆ ತೆರಳುವ ವಹಿವಾಟಿನ ರಸ್ತೆ ಖಾಸಗಿಯವರದ್ದು ಎಂದು ತಿಳಿದುಬಂದಿರುವುದರಿಂದ ಅವರು ಅದನ್ನು ಉಳುಮೆ ಮಾಡಿಕೊಂಡು ಗದ್ದೆಯನ್ನಾಗಿ ಪರಿವರ್ತಿಸಿದ್ದಾರೆ. ಇನ್ನೊಂದೆಡೆ ಸರಕಾರಿ ದಾಖಲೆಗಳ ಪ್ರಕಾರ ಇರುವ ರಸ್ತೆಯನ್ನು ಓರ್ವ ರೈತ ಅತಿಕ್ರಮಣ ಮಾಡಿಕೊಂಡಿದ್ದಾನೆ. ಪರಿಣಾಮ ಹೊಲಗಳಿಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ತಹಶೀಲ್ದಾರರು ಸಕರ್ಾರಿ ದಾಖಲೆಗಳಲ್ಲಿ ನಮೂದಾಗಿರುವಂತೆ ಅತಿಕ್ರಮಣಗೊಂಡ ಜಮೀನನ್ನು ಬಿಡಿಸಿಕೊಂಡು ಅದನ್ನು ರಸ್ತೆಯನ್ನಾಗಿ ಪರಿವತರ್ಿಸಿ ಜನರ ಓಡಾಟಕ್ಕೆ ಅನುವು ಮಾಡಿಕೊಡಬೇಕು ಎಂದು ತಹಶೀಲ್ದಾರರಿಗೆ ಕೋರಲಾಯಿತು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 