ದಾಂಡೇಲಿಯ ಜೆ.ಎಮ್.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆ
National Cleanliness Day celebration at JMFC Court premises, Dandeli
ದಾಂಡೇಲಿ ಜ 31 : ಆರೋಗ್ಯ ಮತ್ತು ಸ್ವಚ್ಚತೆ ಒಂದಕ್ಕೊಂದು ಪೂರಕವಾಗಿವೆ. ವೈಯಕ್ತಿಕ ನೈರ್ಮಲ್ಯ, ಸ್ವಚ್ಚ ಪರಿಸರ ರೋಗ ಮುಕ್ತ ಸಮಾಜ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅನಿವಾರ್ಯವಾಗಿದೆ ಎಂದು ದಾಂಡೇಲಿ ಜೆ.ಎಮ್.ಎಪ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ ನುಡಿದರು. ಅವರು ನ್ಯಾಯಾಲಯದ ಆವರಣದಲ್ಲಿ ದಾಂಡೇಲಿ ನಗರಸಭೆ, ನ್ಯಾಯಾವಾದಿಗಳ ಸಂಘ, ಕಂದಾಯ ಇಲಾಖೆ, ಅಭಿಯೋಜನಾ ಇಲಾಖೆಯ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ತಹಶೀಲದಾರ ಶೈಲೇಶ ಪರಮಾನಂದ ಅವರು ಸುಚಿತ್ವವನ್ನು ನಿರ್ಲಕ್ಷಿಸಿದರೆ, ನಾವು ಸುಲಭವಾಗಿ ಅನಾರೋಗ್ಯಕ್ಕೆ ಒಳಗಾಗಬಹುದು ಈ ಹಿನ್ನೆಲೆಯಲ್ಲಿ ಜನರು ಸ್ವಚ್ಚತೆ ಮತ್ತು ಆರೋಗ್ಯದತ್ತ ಹೆಚ್ಚಿನ ಗಮನಹರಿಸಬೇಕು. ನಗರಸಭೆ ಪೌರಾಯುಕ್ತ ವಿವೇಕ ಬನ್ನೆ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಮ್ ದಬಗಾರ, ಹಿರಿಯ ವಕೀಲರಾದ ಎಮ್.ಸಿ ಹೆಗಡೆ, ವಕೀಲ ಆರ್.ವಿ ಗಡೆಪ್ಪನವರ ಉಪಸ್ಥಿತರಿದ್ದು ಸಾಂದರ್ಭಿಕವಾಗಿ ಮಾತನಾಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 