ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
National Tobacco Control Programme
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಜಮಖಂಡಿ, 21 : ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ. ತಂಬಾಕು ಸೇವನೆಯಿಂದ ದುಷ್ಪರಿಣಾಮಗಳು ಮತ್ತು ಕಾನುನೂ ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳು ಕೆಂಪು ಗುಲಾಬಿ ಹೂವನ್ನು ನೀಡಿ. ಕರಪತ್ರಗಳನ್ನು ವಿತರಿಸಿ ಜಾಗೃತಿಯನ್ನು ಮೂಡಿಸಿದರು.ಕೋಟ್ಪಾ-2003 ರ ಕಾಯ್ದೆಯ ಸೆಕ್ಷನ್ 6(ಬಿ) ಯ ನಿಬಂಧನೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಜಾತಾ ಮೂಲಕ ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ ತಂಬಾಕು ಮಾರಾಟಗಾರರಿಗೆ ಅದರ ದುಷ್ಪರಿಣಾಮಗಳ ಬಗ್ಗೆ ವಿವರಿಸಿ ಮಾರಾಟ ಮಾಡದಂತೆ ವಿನಂತಿ ಮಾಡಿಕೊಂಡರು. ತಾಲೂಕು ಆರೋಗ್ಯ ಅಧಿಕಾರಿಗಳು ಡಾ. ಜಿ.ಎಸ್. ಗಲಗಲಿ ಅವರು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವೀರಭದ್ರ್ಪ ಜಿ.ಎಮ್. ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಉಮೇಶ ಜೋಶಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಟಳ್ಳಿ, ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಶಿವಲಿಂಗ, ತಾಲೂಕು ಆರೋಗ್ಯ ಸಿಬ್ಬಂದಿಗಳಾದ ಸಂತೋಷ ನಾಯಕ, ಮಲ್ಲು ಅಸ್ಕಿ, ರವಿ ಪಾಟೀಲ, ರವಿ ಕಾಂಬಳೆ, ಶಂಕರ ಮಡಿವಾಳಯ್ಯ, ಎಸ್,ಎಮ್. ಕೋರಿ, ಅನೀಲ ಸೊರಗೊಂಡ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 