ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
New office bearers appointed for Jaya Karnataka Rakshana Vedike organization
ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
ಬಳ್ಳಾರಿ 12 : (11)ರಂದು ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಹೆಚ್. ಎಸ್. ಸುಧಾಕರ್ ಹೆಗಡೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಆಟೋ ಮಂಜು ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನಾಗಿ ಶ್ರೀ ದೇವರೆಡ್ಡಿ ಯಾದವ್ ಅವರನ್ನು ಆಯ್ಕೆ ಮಾಡಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಾನ್ಯ ಶ್ಯಾಮ್ ಸುಂದರ್.ಕೆ ರವರು ಆದೇಶಿಸಿದರು.ಇದೆ ವೇಳೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಕೆ.ಶ್ಯಾಮ್ ಸುಂದರ್ ಅವರು ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗೆ ಶ್ರಮ ಪಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದರು .ನಂತರ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಧಾಕರ್ ಹೆಗಡೆ ಅವರು ನಾನು ಸಂಘದಿಂದ ದುಡಿಯಲು ಬಯಸಿಲ್ಲ ಸಂಘಕ್ಕಾಗಿ ದುಡಿಯಲು ಬಯಸಿ ಈ ಒಂದು ಉನ್ನತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಕೆ ಪಿ ಹಸೇನ್ ರಾಜ್ಯ ಉಪಾಧ್ಯಕ್ಷ ರಾಜು ತಲಮಾಮಿಡಿ ರಾಜ್ಯ ಮುಖಂಡರಾದ ಹಗರಿ ಗುರು ಪ್ರಸಾದ್ ಸೇರಿದಂತೆ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 